ಬ್ರೇಕಿಂಗ್ ನ್ಯೂಸ್
03-07-26 10:17 pm HK News Staffer ಕರಾವಳಿ
ಮಂಗಳೂರು, ಜುಲೈ 3: ನಗರದ ಕುಳೂರು ಬಳಿಯ ಹೆದ್ದಾರಿಯಲ್ಲಿ ಟ್ಯಾಂಕರ್ ಲಾರಿಯೊಂದು ಹಿಂದಿನಿಂದ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಹಳೆಯಂಗಡಿ ಬಳಿಯ ತೋಕೂರು ನಿವಾಸಿ ಸದಾಶಿವ ಶೆಟ್ಟಿಗಾರ್(46) ಮೃತರು. ಇವರು ವೃತ್ತಿಯಲ್ಲಿ ಇನ್ಸೂರೆನ್ಸ್ ಏಜಂಟ್ ಆಗಿದ್ದು ಮಂಗಳೂರಿಗೆ ಕಾರ್ಯ ನಿಮಿತ್ತ ಬಂದು ಸಂಜೆ ವೇಳೆಗೆ ಮನೆಯತ್ತ ತೆರಳುತ್ತಿದ್ದರು. ಭಾರೀ ಮಳೆಯ ನಡುವೆ ಟ್ರಾಫಿಕ್ ದಟ್ಟಣೆ ಇರುವಾಗಲೇ ಕುಳೂರು ವಿಆರ್ ಎಲ್ ಕಚೇರಿ ಮುಂಭಾಗದಲ್ಲಿ ಅಪಘಾತ ನಡೆದಿದೆ.
ಸ್ಕೂಟರ್ ಸವಾರ ಟ್ಯಾಂಕರ್ ಎಡ ಬದಿಯಿಂದ ಚಲಿಸುತ್ತಿದ್ದಾಗ ತಾಗಿದ್ದೋ, ಸ್ಕೂಟರ್ ಹಿಂದಿನಿಂದಲೇ ಟ್ಯಾಂಕರ್ ಡಿಕ್ಕಿ ಆಗಿದೆಯೇ ಎನ್ನುವುದು ಪೊಲೀಸರಿಗೂ ದೃಢವಾಗಿಲ್ಲ. ಲಾರಿ ಚಾಲಕ ಮಹಮ್ಮದ್ ಅಜರುದ್ದೀನ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸ್ಕೂಟರ್ ರಸ್ತೆಯಿಂದ ಹೊರಕ್ಕೆ ಎಡಬದಿಗೆ ಬಿದ್ದಿದ್ದು ಸವಾರನ ತಲೆ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮಳೆಯಿಂದಾಗಿ ರಸ್ತೆ ಕಾಣುತ್ತಿರಲಿಲ್ಲ, ಎಡ ಬದಿಗಿದ್ದ ಸ್ಕೂಟರ್ ಕೂಡ ಕಾಣುತ್ತಿರಲಿಲ್ಲ ಎಂದು ಲಾರಿ ಚಾಲಕ ಪೊಲೀಸರಲ್ಲಿ ತಿಳಿಸಿದ್ದಾನೆ. ಬಸ್, ಟ್ಯಾಂಕರ್, ಲಾರಿ ಇನ್ನಿತರ ಯಾವುದೇ ಘನ ವಾಹನಗಳ ಎಡ ಬದಿಯಿಂದ ಓವರ್ ಟೇಕ್ ಆಗಲೀ, ಟ್ರಾಫಿಕ್ ನಲ್ಲಿ ಸಂಚರಿಸುವಾಗಲೂ ಜಾಗ್ರತೆ ಇರಬೇಕಾಗುತ್ತದೆ. ದೊಡ್ಡ ವಾಹನಗಳ ಚಾಲಕರಿಗೆ ಎಡ ಬದಿ ಇರುವ ಸಣ್ಣ ವಾಹನಗಳು ಕಾಣದೆ ಅಪಘಾತಕ್ಕೆ ಕಾರಣವಾಗುತ್ತದೆ. ಹೀಗಾಗಿ ಹೆದ್ದಾರಿಯಲ್ಲಿ ಸಂಚರಿಸುವಾಗ ಹೆಚ್ಚು ಜಾಗ್ರತೆ ವಹಿಸಬೇಕಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm