ಬ್ರೇಕಿಂಗ್ ನ್ಯೂಸ್
08-07-26 11:04 pm HK News Desk ಕರಾವಳಿ
ಮಂಗಳೂರು, ಜುಲೈ 8ನಗರದ ಕೆಪಿಟಿ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಡಿವೈಡರ್ ಮೇಲೆ ಬಿದ್ದು ಬೈಕ್ ಸವಾರಿ ಮಾಡುತ್ತಿದ್ದ ಬಿಎಸ್ಎಫ್ ಯೋಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಲತಃ ಕಡಬ ತಾಲೂಕಿನ ಕೊಯ್ಲ ಗ್ರಾಮದ ನಿವಾಸಿ, ಸದ್ಯ ಸುರತ್ಕಲ್ ಬಳಿಯ ಪೆರ್ಮುದೆ ಎಂಬಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಿದ್ದ ಸೀತಾರಾಮ ಗೌಡ (47) ಮೃತರು. ಇವರು ಸಿಐಎಸ್ಎಫ್ ಸಿಬಂದಿಯಾಗಿದ್ದು, ಜಮ್ಮು ಕಾಶ್ಮೀರದ ಜಮ್ಮುವಿನಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ಕರ್ತವ್ಯದಲ್ಲಿದ್ದರು. ಇತ್ತೀಚೆಗೆ ರಜೆಯಲ್ಲಿ ಊರಿಗೆ ಬಂದಿದ್ದರು.
ಮತಪಟ್ಟಿ ಪರಿಷ್ಕರಣೆ- ಎಸ್ಐಆರ್ ಆಗುತ್ತಿರುವ ಹಿನ್ನೆಲೆಯಲ್ಲಿ ದಾಖಲೆಗಳನ್ನು ಕೊಡುವುದಕ್ಕಾಗಿ ತನ್ನ ಊರು ಕಡಬಕ್ಕೆ ತೆರಳಿ ಅಲ್ಲಿಂದ ಬೈಕಿನಲ್ಲಿ ಹಿಂತಿರುಗುತ್ತಿದ್ದರು. ಕೆಪಿಟಿ ಜಂಕ್ಷನ್ ದಾಟಿ ಮುಂದಿನ ಎಸ್ ಕೆಎಸ್ ಫ್ಲಾಟ್ ಮುಂಭಾಗದಲ್ಲಿ ಇವರ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಏರಿ ಹೋಗಿದ್ದು, ಪಲ್ಟಿಯಾಗಿ ಬಿದ್ದಿದೆ. ಅಪಘಾತ ಹೇಗಾಯ್ತು ಅನ್ನುವುದು ಸ್ಪಷ್ಟವಾಗಿಲ್ಲ, ತನಿಖೆ ನಡೆಸುವುದಾಗಿ ಕದ್ರಿ ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ತಲೆಗೆ ಏಟು ಬಿದ್ದಿದ್ದರಿಂದ ಮೃತಪಟ್ಟಿದ್ದಾರೆ. ಸೀತಾರಾಮ ಗೌಡ ಅವರು ಪತ್ನಿ, ಮಗಳು ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm