ಬ್ರೇಕಿಂಗ್ ನ್ಯೂಸ್
13-07-26 09:16 pm HK News Staffer ಕರಾವಳಿ
ಬಂಟ್ವಾಳ, ಜು.13: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಜನತೆಯ ಬಹುದಿನಗಳ ಕನಸಾಗಿದ್ದ ಬಂಟ್ವಾಳ ರೈಲ್ವೆ ನಿಲ್ದಾಣದ ನವೀಕರಣ ಕಾರ್ಯ ಕೊನೆಗೂ ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದ 'ಅಮೃತ ಭಾರತ ಸ್ಟೇಷನ್ ಸ್ಕೀಮ್' ಯೋಜನೆಯಡಿ ₹26.18 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕವಾಗಿ ಮರುನಿರ್ಮಾಣಗೊಂಡಿರುವ ನಿಲ್ದಾಣವನ್ನು ಜುಲೈ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಗೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದರು. ಅಮೃತ ಭಾರತ ಸ್ಟೇಷನ್ ಸ್ಕೀಮ್ನ ಎರಡನೇ ಹಂತದಡಿ ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಸಂಪೂರ್ಣ ಕಾಯಕಲ್ಪ ನೀಡಲಾಗಿದ್ದು, ನೈಋತ್ಯ ರೈಲ್ವೆ ವಲಯದಲ್ಲಿ ಸಮಗ್ರ ಆಧುನೀಕರಣಗೊಂಡ ಪ್ರಮುಖ ನಾಲ್ಕು ನಿಲ್ದಾಣಗಳಲ್ಲಿ ಇದು ಒಂದಾಗಿದೆ.
ಈ ಯೋಜನೆಯಡಿ ನಿಲ್ದಾಣವನ್ನು ಕೇವಲ ಸುಂದರಗೊಳಿಸುವುದಲ್ಲದೆ, ಪ್ರಯಾಣಿಕರ ಸುರಕ್ಷತೆ, ಅನುಕೂಲತೆ ಹಾಗೂ ಆಧುನಿಕ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಪ್ರಮುಖ ಸೌಲಭ್ಯಗಳು
ಡಿಜಿಟಲ್ ಸೌಲಭ್ಯಗಳೂ ಲಭ್ಯ
ಪ್ರಯಾಣಿಕರ ಅನುಕೂಲಕ್ಕಾಗಿ ನಿಲ್ದಾಣದಲ್ಲಿ ಹಲವು ಅತ್ಯಾಧುನಿಕ ಡಿಜಿಟಲ್ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ.
ದೇಶಾದ್ಯಂತ 75 ನಿಲ್ದಾಣಗಳ ಏಕಕಾಲದ ಲೋಕಾರ್ಪಣೆ
ಅಮೃತ ಭಾರತ ಸ್ಟೇಷನ್ ಯೋಜನೆಯ ಎರಡನೇ ಹಂತದಡಿ ದೇಶದಾದ್ಯಂತ ಮರುನಿರ್ಮಾಣಗೊಂಡಿರುವ 75 ರೈಲ್ವೆ ನಿಲ್ದಾಣಗಳನ್ನು ಜುಲೈ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ವರ್ಚುವಲ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಬಂಟ್ವಾಳ ನಿಲ್ದಾಣದ ಜೊತೆಗೆ, ಹುಬ್ಬಳ್ಳಿ ವಿಭಾಗದ ಕೊಪ್ಪಳ, ಬಾದಾಮಿ ಮತ್ತು ಅಳ್ನಾವರ ರೈಲ್ವೆ ನಿಲ್ದಾಣಗಳೂ ಇದೇ ವೇಳೆ ಉದ್ಘಾಟನೆಯಾಗಲಿವೆ. ಬಂಟ್ವಾಳ ರೈಲ್ವೆ ನಿಲ್ದಾಣದ ಈ ಆಧುನಿಕ ಮೇಕ್ಓವರ್ ಕರಾವಳಿ ಭಾಗದ ಪ್ರಯಾಣಿಕರಿಗೆ ಮತ್ತಷ್ಟು ಸುರಕ್ಷಿತ, ಸುಲಭ ಹಾಗೂ ಆರಾಮದಾಯಕ ಪ್ರಯಾಣದ ಅನುಭವವನ್ನು ನೀಡಲಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm