ಬ್ರೇಕಿಂಗ್ ನ್ಯೂಸ್
12-08-20 06:53 am Headline Karnataka News Network ಕರಾವಳಿ
ಉಡುಪಿ, ಆಗಸ್ಟ್ 12: ಇದು ಪೂರ್ವನಿಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಯಿ ಅಭಿಪ್ರಾಯ ಪಟ್ಟಿದ್ದಾರೆ. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದು ಕಾನೂನು ಸುವ್ಯವಸ್ಥೆ ಹದಗೆಡಿಸಲು ಪ್ರಯತ್ನಮಾಡಿದ್ದಾರೆ.
ರಾಜ್ಯ ಶಾಂತವಾಗಿದೆ ಇದನ್ನು ಸಹಿಸದ ಸಮಾಜಘಾತಕ ಶಕ್ತಿಗಳು ಸಂದರ್ಭದ ಉಪಯೋಗ ಮಾಡಿದ್ದಾರೆ ಎಂದು ಅವರು ಸಂಗ್ರಹವಾಗುತ್ತಿದೆ. ಬೆಂಗಳೂರು ಕೆ ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಮಾಜ ಸ್ವಾಸ್ಥ್ಯ ಹದಗೆಡಿಸಲು ಪ್ರಯತ್ನ ಮಾಡಿದ್ದಾರೆ. ನಿಯಂತ್ರಣ ಸಂಪೂರ್ಣ ತಪ್ಪಿದಾಗ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಮನಸೋಇಚ್ಛೆ ವರ್ತಿಸಿದಾಗ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ ಎಂದು ಅವರು ಸ್ಪಷ್ಟ ಪಡಿಸಿದರು.
ಮೂರು ಜನ ಗೋಲಿಬಾರ್ ನಲ್ಲಿ ಅಸುನೀಗಿದ್ದಾರೆ. ಪೊಲೀಸರಿಗೂ ಕಲ್ಲುತೂರಾಟದಲ್ಲಿ ಗಾಯಗಳಾಗಿವೆ. ಓರ್ವ ಪೊಲೀಸ್ ಸಿಬ್ಬಂದಿ ತಲೆಗೆ ಗಂಭೀರ ಗಾಯವಾಗಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಅವರು ಹೇಳಿದರು.
ಈ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 110 ಜನ ಬಂಧನವಾಗಿದೆ. ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಥಮ ಆದ್ಯತೆ ನೀಡಲಾಗುವುದು. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡುತ್ತಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹ ಕಾರ್ಯದರ್ಶಿ ನಿರಂತರ ಸಂಪರ್ಕದಲ್ಲಿ ಇದ್ದಾರೆ.
ಗಲಭೆ ನಡೆದ ಪ್ರದೇಶಕ್ಕೆ 6 ಕಂಪನಿ ಸಿ ಆರ್ ಪಿ ಎಫ್ ಬರ್ತಾ ಇದೆ. ಮೂರು ಹೈದರಾಬಾದಿನ ಮೂರು ಚೆನ್ನೈನಿಂದ ಬರ್ತಾ ಇದೆ. ಆರು ಕಂಪನಿಯನ್ನು ಎಲ್ಲಿ ಡಿಪ್ಲೈ ಮಾಡಬೇಕು ಅನ್ನೋದನ್ನ ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ರಾಪಿಡ್ ಅಕ್ಷನ್ ಫೋರ್ಸ್ ಬರ್ತಾಯಿದೆ. ಗರುಡ ಫೋರ್ಸ್ ಕೂಡ ಸ್ಥಳದಲ್ಲಿದೆ. ಎರಡು ಪ್ರದೇಶ ಸಂಪೂರ್ಣ ಪೊಲೀಸರ ಹತೋಟಿಯಲ್ಲಿದೆ ಎಂದು ಅವರು ಹೇಳಿದರು.
ಈ ಗಲಭೆ ಪ್ರಕರಣಕ್ಕೆ ಸಂಬಂಧಿಸುದಂತೆ ಇನ್ನಷ್ಟು ಬಂಧನ ಆಗೋದು ಬಾಕಿ ಇದೆ. ಈ ಪುಂಡರ ಹಿಂದೆ ಯಾರಿದ್ದಾರೆ ಅನ್ನೋದನ್ನ ತನಿಖೆ ಮಾಡುತ್ತೇವೆ. ಸಿಎಂ ಜೊತೆ ಬೆಳಿಗ್ಗೆ ಚರ್ಚೆ ಮಾಡಿದ್ದೇನೆ. ಮಧ್ಯಾಹ್ನ ಸಿಎಂ ಮತ್ತು ಹಿರಿಯ ಅಧಿಕಾರಿ ಜೊತೆ ಮತ್ತೊಂದು ಸುತ್ತಿನ ಚರ್ಚೆ ಇದೆ. ಸಿಸಿ ಕ್ಯಾಮರ ದಾಖಲೆ ಪೊಲೀಸ್ ಠಾಣೆಯ ದಾಖಲೆ ಸಂಗ್ರಹಿಸುತ್ತೇವೆ. ಪುಂಡಾಟಿಕೆ ಮುಂಚೂಣಿ ಯಲ್ಲಿದ್ದವರು ಮಾಹಿತಿ ಸಂಗ್ರಹವಾಗುತ್ತಿದೆ. ಫೇಸ್ಬುಕ್ ನಲ್ಲಿ ಚರ್ಚೆ ಮಾಡಿ ಗಲಭೆಗೆ ಕರೆ ಕೊಟ್ಟಿದ್ದಾರೆ. ಕೆ ಜಿ ಹಳ್ಳಿ ಗಲಭೆ ಪ್ಲಾನ್ ಮಾಡಿ ಕೃತ್ಯ ಎಸಗಿದ್ದಾರೆ ಎಂದು ಅವರು ತಿಳಿಸಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm