ಬ್ರೇಕಿಂಗ್ ನ್ಯೂಸ್
17-07-26 07:22 pm HK News Staffer ಕರಾವಳಿ
ಉಳ್ಳಾಲ, ಜು.17: ಉಳ್ಳಾಲ ಸಮುದ್ರ ತೀರಕ್ಕೆ ರಾಶಿ ರಾಶಿ ಬೂತಾಯಿ ಮೀನುಗಳು ಬಂದು ಅಪ್ಪಳಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಶುಕ್ರವಾರ ಬೆಳಗ್ಗೆ 11.30ರ ವೇಳೆಗೆ ಉಳ್ಳಾಲ ಸಮುದ್ರ ಕಿನಾರೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು ದಡಕ್ಕೆ ಅಪ್ಪಳಿಸಿವೆ. ಸುಮಾರು ಅರ್ಧ ತಾಸಿನ ವರೆಗೂ ಮೀನುಗಳು ತೀರಕ್ಕೆ ಅಪ್ಪಳಿಸಿದ್ದು ಸ್ಥಳೀಯರು ಹಾಗೂ ಬೀಚಲ್ಲಿ ಪಹರೆ ಕಾಯುತ್ತಿದ್ದ ಗೃಹ ರಕ್ಷಕ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮೀನುಗಳನ್ನ ಪ್ಲಾಸ್ಟಿಕ್ ಲಕೋಟೆ, ಗೋಣಿ ಚೀಲಗಳಲ್ಲಿ ತುಂಬಿಸಿದ್ದಾರೆ. ಇನ್ನು ಕೆಲವರು ತೀರದಲ್ಲಿ ಸಿಕ್ಕ ಬೂತಾಯಿ ಮೀನುಗಳನ್ನ ಸಂಗ್ರಹಿಸಿ ಮಾರಾಟ ನಡೆಸಿ ಸಾವಿರಾರು ರೂಪಾಯಿಗಳನ್ನ ಸಂಪಾದಿಸಿದ್ದಾರೆ.

ಸಮುದ್ರ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಜೇಶ್ವರದ ಯಾಂತ್ರೀಕೃತ ನಾಡ ದೋಣಿಗಳು ವೇಗದಲ್ಲಿ ಹಾದು ಹೋದ ಪರಿಣಾಮ ಮೋಟಾರು ಯಂತ್ರದ ಸದ್ದಿಗೆ ಬೂತಾಯಿ ಮೀನುಗಳ ಹಿಂಡು ಏಕಾಏಕಿ ದಡಕ್ಕೆ ಅಪ್ಪಳಿಸಿರಬಹುದು ಎಂದು ಸ್ಥಳೀಯ ಮೀನುಗಾರರೊಬ್ಬರು ಹೇಳಿದ್ದಾರೆ.
ಆದರೆ ಮಳೆಗಾಲದಲ್ಲಿ ಈ ರೀತಿ ಬೂತಾಯಿ ಮೀನುಗಳ ರಾಶಿ ಬಂದು ಬೀಳುತ್ತಿರುವುದು ಹಿಂದೆಯೂ ನಡೆದಿತ್ತು. ಪಣಂಬೂರು, ಮಲ್ಪೆಯಲ್ಲಿ ಮೀನುಗಳು ರಾಶಿ ರಾಶಿಯಾಗಿ ಬಂದು ದಡಕ್ಕೆ ಅಪ್ಪಳಿಸಿದ್ದವು. ಮೀನುಗಳು ಹಿಂಡಾಗಿ ಹೋಗುವ ಸಂದರ್ಭದಲ್ಲಿ ತೀರದತ್ತ ಬಂದರೆ ಅಬ್ಬರದ ಅಲೆಗಳಿಗೆ ಸಿಲುಕಿ ಮೇಲಕ್ಕೆ ಎಸೆಯಲ್ಪಡುತ್ತವೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm