ಬ್ರೇಕಿಂಗ್ ನ್ಯೂಸ್
17-07-26 10:25 pm HK News Staffer ಕರಾವಳಿ
ಮಂಗಳೂರು, ಜು.17: ಬಿಸಿರೋಡ್ನಲ್ಲಿ ನಡುರಸ್ತೆಯಲ್ಲೇ ಯುವತಿ ಲಾವಣ್ಯಳನ್ನ ಮಾರಕಾಸ್ತ್ರದಿಂದ ಹತ್ಯೆ ಮಾಡಿದ ಪ್ರಕರಣ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದೇ ವೇಳೆ ಮಗಳನ್ನು ಕಳೆದುಕೊಂಡ ನೋವಿನಲ್ಲಿ ಮುಳುಗಿರುವ ಲಾವಣ್ಯ ಕುಟುಂಬಸ್ಥರು ಆರೋಪಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಬಂಧಿಸಬೇಡಿ... ನಡುರಸ್ತೆಯಲ್ಲೇ ಎನ್ಕೌಂಟರ್ ಮಾಡಿ’
ನ್ಯೂಸ್18 ಕನ್ನಡದೊಂದಿಗೆ ಮಾತನಾಡಿದ ಲಾವಣ್ಯ ತಂದೆ ಬಾಲಕೃಷ್ಣ ಗೌಡ, ಆರೋಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಚೇತನ್ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಅವನು ನಮ್ಮ ಮನೆಗೆ ಎಂದಿಗೂ ಬಂದಿರಲಿಲ್ಲ. ದೂರದ ಸಂಬಂಧಿ ಅಷ್ಟೇ. ಲಾವಣ್ಯ ಅವನೊಂದಿಗೆ ಮಾತನಾಡುತ್ತಿದ್ದಳೋ ಇಲ್ಲವೋ ನಮಗೆ ಗೊತ್ತಿರಲಿಲ್ಲ. ಯಾವುದೇ ವಿಚಾರವನ್ನೂ ಆಕೆ ನಮ್ಮ ಬಳಿ ಹೇಳಿರಲಿಲ್ಲ. ಇಂತಹವನನ್ನು ಬಂಧಿಸುವುದಲ್ಲ, ನಡುರಸ್ತೆಯಲ್ಲೇ ಎನ್ಕೌಂಟರ್ ಮಾಡಬೇಕು" ಎಂದು ಅವರು ಆಗ್ರಹಿಸಿದರು.

‘ಅವನನ್ನು ಇಲ್ಲಿಗೆ ಕರೆತನ್ನಿ... ನಾನೇ ಮುಗಿಸುತ್ತೇನೆ’ ಎಂದ ತಾಯಿ
ಮಗಳ ಸಾವಿನಿಂದ ಕಂಗಾಲಾಗಿರುವ ಲಾವಣ್ಯ ತಾಯಿ ಕಣ್ಣೀರಿಡುತ್ತಾ, "ಆತನನ್ನು ಇಲ್ಲಿಗೆ ಕರೆತನ್ನಿ. ಊರಿನ ಜನರೆಲ್ಲರ ಎದುರೇ ನಾನೇ ಅವನನ್ನು ಮುಗಿಸುತ್ತೇನೆ. ನನ್ನ ಮಗಳು ಅಮಾಯಕಳು. ಅವಳು ಯಾರೊಂದಿಗೂ ಅನಗತ್ಯವಾಗಿ ಮಾತನಾಡುವ ಸ್ವಭಾವದವಳಲ್ಲ. ಕೆಲಸಕ್ಕೆ ಹೋಗಬೇಡ ಎಂದರೂ, ಮನೆಯಲ್ಲಿ ಕೂರುವುದಿಲ್ಲ ಎಂದು ಹಠ ಹಿಡಿದು ಕೆಲಸಕ್ಕೆ ಹೋಗಿದ್ದಳು. ಹಣದ ಅನಿವಾರ್ಯತೆ ಇರಲಿಲ್ಲ. ಕಲಿತಿದ್ದಾಳೆ ಎಂಬ ಕಾರಣಕ್ಕೆ ಕಳುಹಿಸಿದ್ದೆವು. ಅವಳು ಎಲ್ಲ ವಿಚಾರವನ್ನೂ ನಮ್ಮ ಬಳಿ ಹಂಚಿಕೊಳ್ಳುತ್ತಿದ್ದಳು. ಆದರೆ ಈ ವಿಚಾರವನ್ನು ಹೇಳಿರಲಿಲ್ಲ. ಯಾವುದೇ ಕಾರಣಕ್ಕೂ ಆರೋಪಿಯನ್ನು ಸುಮ್ಮನೆ ಬಿಡಬಾರದು" ಎಂದು ಆಕ್ರಂದನ ವ್ಯಕ್ತಪಡಿಸಿದರು.
ಲಾವಣ್ಯ ಸ್ವಗ್ರಾಮ ಕಕ್ಕೆಪದವಿನ ಕೊಡಂಗೆ ಉಳಿ ಪ್ರದೇಶದ ಮನೆಯಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಮನೆ ಬಳಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ.
ನಾಲ್ಕು ವರ್ಷಗಳ ಹಿಂದೆಯೇ ಬ್ರೇಕಪ್?
ಪ್ರಾಥಮಿಕ ತನಿಖೆಯ ಪ್ರಕಾರ, ಲಾವಣ್ಯ ಮತ್ತು ಚೇತನ್ ನಡುವಿನ ಸಂಬಂಧ ಸುಮಾರು ನಾಲ್ಕು ವರ್ಷಗಳ ಹಿಂದೆಯೇ ಮುರಿದು ಹೋಗಿತ್ತು ಎನ್ನಲಾಗಿದೆ. ಆದರೂ ಚೇತನ್ ಲಾವಣ್ಯರನ್ನು ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಎಲ್ಲಾ ಆಯಾಮಗಳ ಬಗ್ಗೆ ಬಂಟ್ವಾಳ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹುಟ್ಟೂರಿನಲ್ಲಿ ಅಂತಿಮ ಸಂಸ್ಕಾರ :
ಲಾವಣ್ಯ ಗೌಡ ಅಂತಿಮ ಸಂಸ್ಕಾರ ಹುಟ್ಟೂರಿನ ಅವರ ನಿವಾಸದ ಬಳಿ ನಡೆಯಿತು. ಅದಕ್ಕೂ ಮುನ್ನ ದೇರಳಕಟ್ಟೆ
ಕೆ.ಎಸ್ ಹೆಗ್ಡೆ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ಬಳಿಕ ಅವರ ಪಾರ್ಥಿವ ಶರೀರವನ್ನು ಅಂಬ್ಯಲೆನ್ಸ್ ನಲ್ಲಿ ಮೆರವಣಿಗೆಯಲ್ಲಿ ಹುಟ್ಟೂರಿಗೆ ತರಲಾಯಿತು.
ದಾರಿ ಮಧ್ಯೆ ಅವರು ಸೇವೆ ಸಲ್ಲಿಸುತ್ತಿದ್ದ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಯಿತು. ಅವರ ಸಹೋದ್ಯೋಗಿಗಳು, ಆಸ್ಪತ್ರೆಯ ಸಿಬಂದಿ, ಸ್ನೇಹಿತರು ಹಾಗೂ ಸ್ಥಳೀಯರು ಅಂತಿಮ ದರ್ಶನ ಪಡೆದು ಕಣ್ಣೀರಿನ ವಿದಾಯ ಸಲ್ಲಿಸಿದರು.
ಅಲ್ಲಿಂದ ಮೃತದೇಹವನ್ನು ಕಕ್ಯಪದವು ಜಂಕ್ಷನ್ಗೆ ತರಲಾಗಿದ್ದು, ಅಲ್ಲಿಯೂ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಕೆಲಕಾಲ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರು ಹಾಗೂ ಊರವರು ಶೋಕತಪ್ತರಾಗಿ ನೆರೆದಿದ್ದರು. ನಂತರ ಹುಟ್ಟೂರಿಗೆ ಕೊಂಡೊಯ್ಯಲಾಯಿತು. ನಿವಾಸದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ನೆರೆದಿದ್ದ ರಾಜಕೀಯ ನಾಯಕರು, ಸಂಘಟನೆಗಳ ಮುಖಂಡರು ಬಂಧು-ಬಳಗ, ಸ್ನೇಹಿತರು, ಹಾಗೂ ಗ್ರಾಮಸ್ಥರು ಮರುಗಿ ಕಣ್ಣೀರಿನೊಂದಿಗೆ ಅಂತಿಮ ನಮನ ಸಲ್ಲಿಸಿದರು.
ಕುಟುಂಬದ ಸದಸ್ಯರು ಹಾಗೂ ಬಂಧುಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆಯ ವಿಧಿ- ವಿಧಾನಗಳು ನೆರವೇರಿದವು. ಹೂವಿನ ಹಾರಗಳಿಂದ ಅಲಂಕರಿಸಲಾಗಿದ್ದ ಲಾವಣ್ಯಳ ಪಾರ್ಥಿವ ಶರೀರವನ್ನು ಅಗ್ನಿಗೆ ಸಮರ್ಪಿಸಲಾಯಿತು.
ಸಚಿವ ಯು.ಟಿ.ಖಾದರ್, ಸಂಸದ ಕ್ಯಾ.ಬೃಜೇಶ್ ಚೌಟ, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm