ಬ್ರೇಕಿಂಗ್ ನ್ಯೂಸ್
08-01-21 11:31 am Mangalore Correspondent ಕರಾವಳಿ
ಮಂಗಳೂರು, ಜ.8 : ಕೇರಳದಿಂದ ದ.ಕ. ಜಿಲ್ಲೆಗೆ ಬರುವ ಎಲ್ಲ ರೀತಿಯ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿ ಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಈ ಮಾಹಿತಿ ನೀಡಿದ್ದಾರೆ.

ನೆರೆ ರಾಜ್ಯ ಕೇರಳದ ಕೊಟ್ಟಾಯಂ ಮತ್ತು ಆಳಪುಝ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲೂ ಈ ರೋಗ ಹರಡುವ ಸಾಧ್ಯತೆ ಇದೆ. ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ, ನೀರು ಸಂಗ್ರಹ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲಕರು ಅಗತ್ಯ ಕ್ರಮ ವಹಿಸಬೇಕು. ಜೊತೆಗೆ ಅನಗತ್ಯವಾಗಿ ಜನರ ಓಡಾಟವನ್ನು ನಿರ್ಬಂಧಿಸಬೇಕು ಎಂದರು.

ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿ ಜ್ವರ ಲಕ್ಷಣ ಕಂಡುಬಂದ್ದಲ್ಲಿ ತಕ್ಷಣವೇ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ರೋಗದ ಪರಿಶೀಲನೆ ಮತ್ತು ರೋಗದ ಕಣ್ಗಾವಲನ್ನು ನಿಗಾ ವಹಿಸಲು ಜಿಲ್ಲೆಯಲ್ಲಿರುವ ಕೋಳಿ ಫಾರಂಗಳಿಗೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಪಶು ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಹಾಗೂ ಪ್ರಾದೇಶಿಕ ಸಂಶೋಧನಾ ಅಧಿಕಾರಿ ವಸಂತ ಶೆಟ್ಟಿ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kerala mangalore Border check posts closed for tucks carrying chickens to prevent spread of bird flu into Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am