ಬ್ರೇಕಿಂಗ್ ನ್ಯೂಸ್
30-07-26 07:51 pm HK News Staffer ಕರಾವಳಿ
ಮಂಗಳೂರು, ಜು.30: ಪತಿಯ ಸತತ ಕಿರುಕುಳದಿಂದ ಮಾನಸಿಕವಾಗಿ ನೊಂದ ಮಹಿಳೆಯೊಬ್ಬರು ದೂರದ ರಾಜಸ್ಥಾನದಿಂದ ಮಂಗಳೂರಿಗೆ ಬಂದು ದಿಕ್ಕು ಕಾಣದೆ ಅಲೆದಾಡುತ್ತಿದ್ದ ವೇಳೆ, ಪಾಂಡೇಶ್ವರ ಪೊಲೀಸರು ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಯ ಸಮಯೋಚಿತ ನೆರವಿನಿಂದ ಸುರಕ್ಷಿತವಾಗಿ ಕುಟುಂಬದ ಮಡಿಲು ಸೇರಿದ್ದಾರೆ.
ರಾಜಸ್ಥಾನದ ಗೋಪಿ ಎಂಬ ಮಹಿಳೆ ಪತಿಯಿಂದ ಅನುಭವಿಸುತ್ತಿದ್ದ ಕಿರುಕುಳದಿಂದ ತೀವ್ರವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದ ಜರ್ಜರಿತರಾದ ಅವರು ಮನೆ ತೊರೆದು ಜೂನ್ 26ರಂದು ಮಂಗಳೂರಿಗೆ ಬಂದಿಳಿದಿದ್ದರು. ನಗರದಲ್ಲಿ ಪರಿಚಯವಿಲ್ಲದ ಸ್ಥಳದಲ್ಲಿ ದಿಕ್ಕು ತೋಚದೆ ಒಂಟಿಯಾಗಿ ಅಲೆದಾಡುತ್ತಿದ್ದರು.
ಸಂಕಷ್ಟದಲ್ಲಿದ್ದ ಮಹಿಳೆಯನ್ನು ಗುರುತಿಸಿದ ಪೊಲೀಸರು;
ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ನಗರದ ಪ್ರದೇಶದಲ್ಲಿ ಅನುಮಾನಾಸ್ಪದ ಹಾಗೂ ಸಂಕಷ್ಟದ ಸ್ಥಿತಿಯಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆಕೆಯನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಳಿಕ ಮಹಿಳೆಯ ಸುರಕ್ಷತೆ ಹಾಗೂ ಆರೈಕೆಯ ದೃಷ್ಟಿಯಿಂದ ಸ್ಥಳೀಯ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ (ಎನ್ಜಿಒ) ಉಳಿಯಲು ವ್ಯವಸ್ಥೆ ಮಾಡಲಾಗಿತ್ತು.


ಕೌನ್ಸೆಲಿಂಗ್ ಮೂಲಕ ಮಾಹಿತಿ ಸಂಗ್ರಹ;
ಎನ್ಜಿಒ ಸಂಸ್ಥೆಯ ಪದಾಧಿಕಾರಿಗಳು ಮಹಿಳೆಗೆ ಅಗತ್ಯ ಆರೈಕೆ ಹಾಗೂ ಮಾನಸಿಕ ಧೈರ್ಯ ತುಂಬುವ ಕೌನ್ಸೆಲಿಂಗ್ ನೀಡಿದ್ದಾರೆ. ಈ ವೇಳೆ ಮಹಿಳೆಯಿಂದ ಆಕೆಯ ಹಿನ್ನೆಲೆ ಹಾಗೂ ಕುಟುಂಬದ ವಿವರಗಳನ್ನು ಪಡೆದುಕೊಂಡಿದ್ದಾರೆ. ನಂತರ ರಾಜಸ್ಥಾನದಲ್ಲಿದ್ದ ಆಕೆಯ ತಂದೆಯನ್ನು ಸಂಪರ್ಕಿಸಿ ಮಗಳು ಮಂಗಳೂರಿನಲ್ಲಿ ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ತಂದೆ-ಮಗಳ ಭಾವುಕ ಭೇಟಿ;
ಮಾಹಿತಿ ತಿಳಿಯುತ್ತಿದ್ದಂತೆ ರಾಜಸ್ಥಾನದಿಂದ ಮಂಗಳೂರಿಗೆ ಆಗಮಿಸಿದ ತಂದೆಗೆ ಎನ್ಜಿಒ ಸಿಬ್ಬಂದಿ ಮಹಿಳೆಯನ್ನು ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ. ದೀರ್ಘ ಸಮಯದ ಬಳಿಕ ಸಂಕಷ್ಟದಲ್ಲಿದ್ದ ಮಗಳನ್ನು ಕಂಡ ತಂದೆ ಹಾಗೂ ತಂದೆಯನ್ನು ಅಪ್ಪಿಕೊಂಡ ಮಗಳ ಭಾವುಕ ಕ್ಷಣಕ್ಕೆ ಮಂಗಳೂರಿನ ಎನ್ಜಿಒ ಸಂಸ್ಥೆ ಸಾಕ್ಷಿಯಾಯಿತು.
ಕೌಟುಂಬಿಕ ಸಮಸ್ಯೆಗಳು ಹಾಗೂ ಮಾನಸಿಕ ಒತ್ತಡದಿಂದ ಸಂಕಷ್ಟಕ್ಕೆ ಸಿಲುಕುವವರು ಆತುರದ ನಿರ್ಧಾರ ಕೈಗೊಳ್ಳದೆ, ಪೊಲೀಸ್ ಇಲಾಖೆ, ಮಹಿಳಾ ಸಹಾಯವಾಣಿ ಹಾಗೂ ವಿಶ್ವಾಸಾರ್ಹ ಸಂಸ್ಥೆಗಳ ನೆರವು ಪಡೆಯಬೇಕು. ಸಂಕಷ್ಟದಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸೂಕ್ತ ನೆರವು ನೀಡುವುದು ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm