ಬ್ರೇಕಿಂಗ್ ನ್ಯೂಸ್
01-08-26 10:25 pm HK News Staffer ಕರಾವಳಿ
ಮಂಗಳೂರು, ಆ.1: ಕರಾವಳಿ ಭಾಗದಲ್ಲಿ ಕೊನೆಗೂ ಮಳೆ ಬಿರುಸಾಗಿದ್ದು ಮುಂಗಾರಿನ ವೈಭವ ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದಲ್ಲಿ ಶನಿವಾರ ಇಡೀ ದಿನ ಮಳೆಯಾಗಿದ್ದು ನದಿ ಕೊಳ್ಳಗಳು ತುಂಬಿ ಹರಿಯತೊಡಗಿವೆ. ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ನದಿಗಳು ಭೋರ್ಗರೆದು ಹರಿದಿದೆ.
ಇದೇ ವೇಳೆ, ಹವಾಮಾನ ಇಲಾಖೆಯಿಂದ ಇನ್ನೊಂದು ವಾರ ಕಾಲ ಇದೇ ರೀತಿ ನಿರಂತರ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಜೋರಾದ ಮಳೆ ಬರುವುದು ವಾಡಿಕೆ. ಆದರೆ ಈ ಬಾರಿ ಜೂನ್, ಜುಲೈ ತಿಂಗಳಲ್ಲಿ ನಿರೀಕ್ಷಿತ ಮಳೆ ಆಗಿಲ್ಲ. ಹೆಚ್ಚಿನ ದಿನಗಳಲ್ಲಿ ಬಿಸಿಲಿದ್ದುದರಿಂದ ಭತ್ತ ಕೃಷಿಕರಿಗೆ ನೀರಿಲ್ಲದೆ ತೊಂದರೆಯಾಗಿತ್ತು. ಈಗ ಅಗಸ್ಟ್ ಕಾಲಿಡುತ್ತಿದ್ದಂತೆ ಮರೆಯಾಗಿದ್ದ ಮಳೆರಾಯ ಧುತ್ತನೆ ಬಂದಿದ್ದಾನೆ. ಕೇರಳ, ಕರ್ನಾಟಕದ ಕರಾವಳಿಯಲ್ಲಿ ಬಿರುಸಿನ ಮಳೆಯಾಗಿದೆ.
ನಿರಂತರ ಮಳೆಯಿಂದಾಗಿ ನೇತ್ರಾವತಿ, ಕುಮಾರಧಾರಾ ನದಿಗಳಲ್ಲಿ ಹರಿವು ಹೆಚ್ಚಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸ್ನಾನಘಟ್ಟ ಮುಳುಗಡೆಯಾಗಿದೆ. ಧರ್ಮಸ್ಥಳ ಬಳಿಯ ಸ್ನಾನಘಟ್ಟ ಮುಳುಗಡೆಯಾಗಿದ್ದು ಭಕ್ತರ ಸ್ನಾನಕ್ಕಾಗಿ ಭದ್ರತೆ ಕಲ್ಪಿಸಲಾಗಿದೆ. ಇದಲ್ಲದೆ, ಆಸುಪಾಸಿನಲ್ಲಿ ಹೊಳೆಗಳು ಕೂಡ ತುಂಬಿ ಹರಿದಿದ್ದು ಮುಂಜಾಗ್ರತಾ ಕ್ರಮಕ್ಕಾಗಿ ಎನ್ ಡಿಆರ್ ಎಫ್ ತಂಡವನ್ನು ಬೆಳ್ತಂಗಡಿಗೆ ಕರೆಸಲಾಗಿದೆ. 30 ಮಂದಿಯ ತಂಡ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ಬೀಡು ಬಿಟ್ಟಿದೆ.









ಮಳೆಯಿಂದಾಗಿ ಧರ್ಮಸ್ಥಳ ಬಳಿಯ ಮುಂಡಾಜೆಯಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಸಂಪರ್ಕ ಕಡಿತಗೊಂಡಿದೆ. ಧರ್ಮಸ್ಥಳ - ಮಣ್ಣಸಂಕ ರಸ್ತೆ ನೇತ್ರಾವತಿ ನೆರೆಯಿಂದಾಗಿ ಜಲಾವೃತಗೊಂಡಿದೆ. ಸವಣಾಲು ಎಂಬಲ್ಲಿ ಫಲ್ಗುಣಿ ನೆರೆಯಿಂದಾಗಿ ಸೇತುವೆ ಮೇಲೆ ನೀರು ಹರಿದಿದೆ. ನೇತ್ರಾವತಿ ನದಿ ಈ ಮಳೆಗಾಲದಲ್ಲಿ ಮೊದಲ ಬಾರಿಗೆ ತುಂಬಿ ಹರಿದಿದ್ದು ವಿಶೇಷ. ಹಿಂದೆಲ್ಲ ನೇತ್ರಾವತಿ ನದಿಯಲ್ಲಿ ಹಲವು ಬಾರಿ ನೆರೆ ಬಂದು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸ್ಥಿತಿಯಾಗುತ್ತಿತ್ತು.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
01-08-26 10:25 pm
HK News Staffer
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm