ಬ್ರೇಕಿಂಗ್ ನ್ಯೂಸ್
08-08-26 12:13 pm HK News Staffer ಕರಾವಳಿ
ಭಟ್ಕಳ , ಆ. 8: ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ಅವರು ‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜನರ ಮೂಲಭೂತ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳ ಪರಿಹಾರಕ್ಕಾಗಿ ಜನಾಂದೋಲನ ರೂಪಿಸುವುದಾಗಿ ಅವರು ತಿಳಿಸಿದ್ದಾರೆ.
ಭಟ್ಕಳದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚೇತನ್, ಭ್ರಷ್ಟಾಚಾರದ ವಿರುದ್ಧ ಹೋರಾಟ ಹಾಗೂ ಪರಿಸರ ಸಂರಕ್ಷಣೆ ತಮ್ಮ ಹೊಸ ರಾಜಕೀಯ ಪಕ್ಷದ ಪ್ರಮುಖ ಆದ್ಯತೆಗಳಾಗಲಿವೆ ಎಂದರು.

ಶರಾವತಿ ಯೋಜನೆಗೆ ವಿರೋಧ;
ಸಾವಿರಾರು ಕೋಟಿ ರೂಪಾಯಿ ವೆಚ್ಚದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಚೇತನ್ ಆತಂಕ ವ್ಯಕ್ತಪಡಿಸಿದರು. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಹಾನಿ ಉಂಟುಮಾಡುವ ಯೋಜನೆಗಳನ್ನು ಸರ್ಕಾರ ಮರುಪರಿಶೀಲಿಸಬೇಕು. ಪರಿಸರಕ್ಕೆ ಕಡಿಮೆ ಹಾನಿಯಾಗುವ ಸೌರಶಕ್ತಿ ಸೇರಿದಂತೆ ಪರ್ಯಾಯ ವಿದ್ಯುತ್ ಉತ್ಪಾದನಾ ವಿಧಾನಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಸಂಪುಟ ವಿಸ್ತರಣೆಯಲ್ಲೂ ಅಸಮಾಧಾನ;
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕರಾವಳಿ ಭಾಗ ಹಾಗೂ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ದೊರೆತಿಲ್ಲ ಎಂದು ಚೇತನ್ ಅಸಮಾಧಾನ ವ್ಯಕ್ತಪಡಿಸಿದರು. ‘ಪರಿವರ್ತನಾ ಪರಿಸರವಾದ’ದ ಆಧಾರದ ಮೇಲೆ ರಾಜ್ಯದಲ್ಲಿ ಹೊಸ ರಾಜಕೀಯ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿರುವುದಾಗಿ ಅವರು ಹೇಳಿದರು.
ಕಾವೇರಿ ವಿಚಾರಕ್ಕೆ ಸೌಹಾರ್ದಯುತ ಪರಿಹಾರ;
ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ರೈತರ ಹಿತವನ್ನು ಕಾಪಾಡುವ ರೀತಿಯಲ್ಲಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು ಎಂದು ಚೇತನ್ ಸಲಹೆ ನೀಡಿದರು. ಇದೇ ವೇಳೆ ಟೊಂಕಾ ಬಂದರು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಗಳು ಈಡೇರಿಲ್ಲ ಎಂದು ಅವರು ಆರೋಪಿಸಿದರು.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm