ಬ್ರೇಕಿಂಗ್ ನ್ಯೂಸ್
12-08-20 08:30 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 12: ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಯು.ಟಿ. ಖಾದರ್, ಹಾವೂ ಸಾಯಬಾರದು, ಕೋಲು ಮುರಿಯಬಾರದು ಅನ್ನುವ ರೀತಿ ಹೇಳಿಕೆ ಕೊಟ್ಟಿದ್ದಾರೆ.
ಲೋಕಕ್ಕೆ ಸೌಹಾರ್ದ, ಸಮಾನತೆ ಹಾಗೂ ಮಾನವೀಯತೆ ಸಾರಿದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿದವರ ವಿರುದ್ಧ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಹಾಗಂತ, ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು. (2)
— UT Khadér (@utkhader) August 11, 2020
ಇದೇ ವೇಳೆ ಮತ್ತೊಂದು ಟ್ವೀಟ್ ಮಾಡಿರುವ ಖಾದರ್, ಪೊಲೀಸ್ ಇಲಾಖೆಯ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ. ಪೋಲಿಸ್ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈಮೀರಿ ಹೋಗುವ ಪ್ರಶ್ನೆ ಬರುವುದಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ. ಹಾಗೆಂದು, ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ. ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಿ , ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರು ಅಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
ಪೋಲಿಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ.(3)
— UT Khadér (@utkhader) August 11, 2020
ಮಾಜಿ ಸಚಿವರಾಗಿ ತಮ್ಮದೇ ಪಕ್ಷದ ಕಾಂಗ್ರೆಸ್ ಶಾಸಕರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆಯನ್ನು ಯುಟಿ ಖಾದರ್ ಖಂಡಿಸಲು ಮುಂದಾಗಿಲ್ಲ. ಟ್ವಿಟರ್ ನಲ್ಲಿ ಪೊಲೀಸರಿಗೆ ಮತ್ತು ಗಲಭೆಕೋರರಿಗೆ ಸಲಹೆಗಳನ್ನು ನೀಡಿದರೆ ಹೊರತು ಕಠಿಣ ಕಾನೂನು ಕ್ರಮಕ್ಕೂ ಆಗ್ರಹಿಸಿಲ್ಲ !
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm