ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am