ಬ್ರೇಕಿಂಗ್ ನ್ಯೂಸ್
08-01-21 05:18 pm Mangalore Correspondent ಕರಾವಳಿ
ಉಳ್ಳಾಲ, ಜ.8: ಉಳ್ಳಾಲದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾತ್ರಿ ರೌಂಡ್ಸಲ್ಲಿ ಇದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದ್ದು , ಆತ ಮಾನಸಿಕನ ಅಸ್ವಸ್ಥನೆಂದು ಮನಗಂಡು ಮಾಹಿತಿ ಪಡೆದು ಪೋಷಕರಿಗೆ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ರೇವಣ ಸಿದ್ಧಪ್ಪ ಮತ್ತು ಪಿಸಿಗಳಾದ ವಾಸುದೇವ ಚೌಹಾಣ್ ಮತ್ತು ಸಾಗರ ದೇವಕತ್ತಿ ಅವರು ಉಳ್ಳಾಲ ಪೇಟೆಯಲ್ಲಿ ಶಂಕಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು ಆತನನ್ನು ಉಪಚರಿಸಿದ್ದಾರೆ. ಮಾನಸಿಕ ಅಸ್ವಸ್ಥನಾದರೂ ತನ್ನ ಹೆಸರು ಮತ್ತು ವಿಳಾಸ ಹೇಳಿದ್ದಾನೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ನಂದಿಪುರ ಗ್ರಾಮದ ನಿವಾಸಿ ಮಂಜುನಾಥನೆಂದು ತಿಳಿದಿದೆ.
ಬಳಿಕ ಉಳ್ಳಾಲ ಪಿಐ ಸಂದೀಪ್ ಅವರ ಮಾರ್ಗದರ್ಶನದಂತೆ ಬಳ್ಳಾರಿ ಜಿಲ್ಲೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಪೊಲೀಸರು ಮಂಜುನಾಥನ ಇರುವಿಕೆಯ ಬಗ್ಗೆ ಆತನ ಪೋಷಕರಿಗೆ ತಿಳಿಸಿದ್ದಾರೆ. ಇಂದು ಮಂಜುನಾಥನ ಸಹೋದರರಾದ ಉಲುಗಪ್ಪ ಮತ್ತು ಶಿವ ಉಳ್ಳಾಲ ಠಾಣೆಗೆ ಬಂದಿದ್ದು ಮಂಜುನಾಥನ ಊರಿಗೆ ಕರೆದೊಯ್ದಿದ್ದಾರೆ.
ಈ ಸಂದರ್ಭ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್, ಪಿಎಸ್ ಐಗಳಾದ ಪ್ರದೀಪ್, ರೇವಣ ಸಿದ್ಧಪ್ಪ, ಶಿವಕುಮಾರ್, ಸಿಬಂದಿ ಮನೋಹರ್, ಪ್ರಶಾಂತ್, ಅಕ್ಬರ್ , ವಾಸುದೇವ ಚೌಹಾಣ್, ಸಾಗರ ದೇವಕತ್ತಿ ಇದ್ದರು.
ನಂದಿಪುರ ನಿವಾಸಿ ಮುದುಕಪ್ಪರ ಮಗನಾದ ಮಂಜುನಾಥ ಕಳೆದ ಒಂದು ವರ್ಷದ ಹಿಂದೆ ಮಾನಸಿಕ ಖಿನ್ನತೆಗೊಳಗಾಗಿದ್ದು ಬಳಿಕ ನಾಪತ್ತೆಯಾಗಿ ಊರೂರು ಅಲೆಯುತ್ತಿದ್ದನೆನ್ನಲಾಗಿದೆ. ಉಳ್ಳಾಲ ಪೊಲೀಸರ ಮಾನವೀಯ ಕಳಕಳಿಗೆ ಮಂಜುನಾಥನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ.
The Ullal police have succeeded in reuniting mentally ill person to his family. This good gesture of Ullal police have given rise to a lot of praises.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am