ಬ್ರೇಕಿಂಗ್ ನ್ಯೂಸ್
08-01-21 10:45 pm Mangaluru Correspondant ಕರಾವಳಿ
ಕೊಣಾಜೆ, ಜ.8: ಯುವ ಕಾಂಗ್ರೆಸ್ ಗಾದಿಯ ರಾಜ್ಯಾಧ್ಯಕ್ಷ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆಂಗಳೂರಿನ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ನಲಪ್ಪಾಡ್ ಪರ ಪ್ರಚಾರಕ್ಕೆ ಬಂದ ಬೆಂಗಳೂರಿನ ಬೆಂಬಲಿಗರು ಮಕ್ಕಳನ್ನು ಅಪಹರಿಸಿದ್ದಾರೆಂಬ ವದಂತಿ ಕೇಳಿಬಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಸಂಗ ನಡೆದಿದೆ.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗೆ ಮಹಮ್ಮದ್ ನಲಪ್ಪಾಡ್ ಸ್ಪರ್ಧಿಸುತ್ತಿದ್ದು, ಇದರ ಹಿನ್ನಲೆಯಲ್ಲಿ ಮುಡಿಪು ಭಾಗಕ್ಕೆ ಮಹಮ್ಮದ್ ಪರವಾಗಿ ಚುನಾವಣಾ ಪ್ರಚಾರಕ್ಕೆ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಮಹಮ್ಮದ್ ಹ್ಯಾರಿಸ್ ಬೆಂಬಲಿಗರು ದೇರಳಕಟ್ಟೆ ಜಂಕ್ಷನ್ ನಲ್ಲಿ ಹಾಟ್ ಚಿಪ್ಸ್ ಸೆಂಟರಲ್ಲಿ ಉಪಹಾರ ಮುಗಿಸಿ ಹೊರ ಬರುತ್ತಿದ್ದ ವೇಳೆ ಹೊರಗಿದ್ದ ಇಬ್ಬರು ಮಕ್ಕಳಿಗೆ ಚಾಕಲೇಟು ನೀಡಲು ಹೋಗಿದ್ದರು. ಈ ಸಂದರ್ಭದಲ್ಲಿ ಒಂದು ಮಗು ಜೋರಾಗಿ ಕಿರುಚಿದ್ದು ಸ್ಥಳೀಯರು ವಿಚಾರಿಸಲು ಬಂದಾಗ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಎರಡು ಕಾರಲ್ಲಿ ಬೆಂಗಳೂರಿಗೆ ತಡಬಡಾಯಿಸಿ ಅಲ್ಲಿಂದ ಹೊರಟಿದ್ದರು.
ಇದರಿಂದ ಸಂಶಯಗೊಂಡು ಅವರನ್ನು ಸ್ಥಳೀಯರು ಬೆನ್ನತ್ತಿದ್ದು ನಾಟೆಕಲ್ ನಲ್ಲಿ ಅಡ್ಡ ಹಾಕಿ ಕೊಣಾಜೆ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯಾಂಶ ಬಯಲಾಗಿದ್ದು, ಮಕ್ಕಳ ಅಪಹರಣ ವಿಚಾರ ಸುಳ್ಳಾಗಿದೆ. ಕೇವಲ ವದಂತಿ ಕೇಳಿ ಸ್ಥಳೀಯರು ಉದ್ರಿಕ್ತರಾಗಿದ್ದರು ಅನ್ನೋದು ತಿಳಿದುಬಂದಿದೆ.
ಮಹಮ್ಮದ್ ನಲಪ್ಪಾಡ್ ಬೆಂಬಲಿಗರ ಕಾರಿನ ಹಿಂಭಾಗ ದಲ್ಲಿ ಮಹಮ್ಮದ್ ಅವರ ಭಾವಚಿತ್ರದ ಸ್ಟಿಕ್ಕರ್ ಅಂಟಿಸಿದ್ದರೆನ್ನಲಾಗಿದೆ. ಘಟನೆಯ ಲಾಭವೆತ್ತಲೆಂದೇ ಕೊಣಾಜೆ ಠಾಣೆಯಲ್ಲಿ ಕೆಲ ಕಾಲ ಜನಜಂಗುಳಿ ಜಮಾವಣೆಯಾಗಿದ್ದು ಪೊಲೀಸರು ಜನರನ್ನು ಚದುರಿಸಿದ್ದಾರೆ.
Supporters of Mohammed Haris Nalapad who is contesting elections for the post of Youth Congress state president are facing allegations of kidnapping a child in Konaje, Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am