ಬ್ರೇಕಿಂಗ್ ನ್ಯೂಸ್
08-01-21 10:45 pm Mangaluru Correspondant ಕರಾವಳಿ
ಕೊಣಾಜೆ, ಜ.8: ಯುವ ಕಾಂಗ್ರೆಸ್ ಗಾದಿಯ ರಾಜ್ಯಾಧ್ಯಕ್ಷ ಚುನಾವಣೆಗೆ ಸ್ಪರ್ಧಿಸುತ್ತಿರುವ ಬೆಂಗಳೂರಿನ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ನಲಪ್ಪಾಡ್ ಪರ ಪ್ರಚಾರಕ್ಕೆ ಬಂದ ಬೆಂಗಳೂರಿನ ಬೆಂಬಲಿಗರು ಮಕ್ಕಳನ್ನು ಅಪಹರಿಸಿದ್ದಾರೆಂಬ ವದಂತಿ ಕೇಳಿಬಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಸಂಗ ನಡೆದಿದೆ.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗೆ ಮಹಮ್ಮದ್ ನಲಪ್ಪಾಡ್ ಸ್ಪರ್ಧಿಸುತ್ತಿದ್ದು, ಇದರ ಹಿನ್ನಲೆಯಲ್ಲಿ ಮುಡಿಪು ಭಾಗಕ್ಕೆ ಮಹಮ್ಮದ್ ಪರವಾಗಿ ಚುನಾವಣಾ ಪ್ರಚಾರಕ್ಕೆ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಮಹಮ್ಮದ್ ಹ್ಯಾರಿಸ್ ಬೆಂಬಲಿಗರು ದೇರಳಕಟ್ಟೆ ಜಂಕ್ಷನ್ ನಲ್ಲಿ ಹಾಟ್ ಚಿಪ್ಸ್ ಸೆಂಟರಲ್ಲಿ ಉಪಹಾರ ಮುಗಿಸಿ ಹೊರ ಬರುತ್ತಿದ್ದ ವೇಳೆ ಹೊರಗಿದ್ದ ಇಬ್ಬರು ಮಕ್ಕಳಿಗೆ ಚಾಕಲೇಟು ನೀಡಲು ಹೋಗಿದ್ದರು. ಈ ಸಂದರ್ಭದಲ್ಲಿ ಒಂದು ಮಗು ಜೋರಾಗಿ ಕಿರುಚಿದ್ದು ಸ್ಥಳೀಯರು ವಿಚಾರಿಸಲು ಬಂದಾಗ ಬೆಂಗಳೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಎರಡು ಕಾರಲ್ಲಿ ಬೆಂಗಳೂರಿಗೆ ತಡಬಡಾಯಿಸಿ ಅಲ್ಲಿಂದ ಹೊರಟಿದ್ದರು.
ಇದರಿಂದ ಸಂಶಯಗೊಂಡು ಅವರನ್ನು ಸ್ಥಳೀಯರು ಬೆನ್ನತ್ತಿದ್ದು ನಾಟೆಕಲ್ ನಲ್ಲಿ ಅಡ್ಡ ಹಾಕಿ ಕೊಣಾಜೆ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯಾಂಶ ಬಯಲಾಗಿದ್ದು, ಮಕ್ಕಳ ಅಪಹರಣ ವಿಚಾರ ಸುಳ್ಳಾಗಿದೆ. ಕೇವಲ ವದಂತಿ ಕೇಳಿ ಸ್ಥಳೀಯರು ಉದ್ರಿಕ್ತರಾಗಿದ್ದರು ಅನ್ನೋದು ತಿಳಿದುಬಂದಿದೆ.
ಮಹಮ್ಮದ್ ನಲಪ್ಪಾಡ್ ಬೆಂಬಲಿಗರ ಕಾರಿನ ಹಿಂಭಾಗ ದಲ್ಲಿ ಮಹಮ್ಮದ್ ಅವರ ಭಾವಚಿತ್ರದ ಸ್ಟಿಕ್ಕರ್ ಅಂಟಿಸಿದ್ದರೆನ್ನಲಾಗಿದೆ. ಘಟನೆಯ ಲಾಭವೆತ್ತಲೆಂದೇ ಕೊಣಾಜೆ ಠಾಣೆಯಲ್ಲಿ ಕೆಲ ಕಾಲ ಜನಜಂಗುಳಿ ಜಮಾವಣೆಯಾಗಿದ್ದು ಪೊಲೀಸರು ಜನರನ್ನು ಚದುರಿಸಿದ್ದಾರೆ.
Supporters of Mohammed Haris Nalapad who is contesting elections for the post of Youth Congress state president are facing allegations of kidnapping a child in Konaje, Mangalore.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm