ಬ್ರೇಕಿಂಗ್ ನ್ಯೂಸ್
09-01-21 12:54 pm Mangalore Correspondent ಕರಾವಳಿ
ಮಂಗಳೂರು, ಜ.9: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳಿಂದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ. ಪಕ್ಷದ ಭವಿಷ್ಯದ ಬಗ್ಗೆ ಆತಂಕಗೊಂಡು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಂಗಳೂರಿನ ಕಂಕನಾಡಿಯ ಗರೋಡಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಶೋಭಾ, ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಮೊನ್ನೆಯ ಪಂಚಾಯತ್ ಚುನಾವಣೆಯಲ್ಲೂ ಇದರ ಸುಳಿವು ಸಿಕ್ಕಿದೆ. ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಎಲ್ಲಾ ಚುನಾವಣೆಗಳಲ್ಲೂ ಸೋಲು ಕಂಡಿದೆ. ಇದರಿಂದ ಡಿಕೆಶಿ, ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಅವರಿಗೆ ಜನ ಬೆಂಬಲವಿಲ್ಲ. ಕಾರ್ಯಕರ್ತರ ಬೆಂಬಲವೂ ಇಲ್ಲ. ಬಿಜೆಪಿಯ ಸಂಘಟನಾತ್ಮಕ ಕಾರ್ಯತಂತ್ರಗಳೆನ್ನು ಡಿಕೆಶಿ ಫಾಲೋ ಮಾಡ್ತಿದ್ದಾರೆ. ಆದರೆ, ಡಿಕೆಶಿಯವರ ಕಾರ್ಯಶೈಲಿಯನ್ನು ಸಿದ್ದರಾಮಯ್ಯ ಅವರೇ ಒಪ್ಪುತ್ತಿಲ್ಲ. ಇದನ್ನು ಮುಚ್ಚಿಕೊಳ್ಳಲು ಬಿಜೆಪಿ ಸರ್ಕಾರ, ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.
ಆದರೆ, ಜನರು ಜಾಗ್ರತರಾಗಿದ್ದಾರೆ. ಅವರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಎಲ್ಲವನ್ನೂ ನೋಡುತ್ತಿದ್ದಾರೆ. ಕಾಂಗ್ರೆಸ್ ಭವಿಷ್ಯಕ್ಕೆ ಕತ್ತಲು ಕವಿಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಪಾಕ್ ಪರ ಘೋಷಣೆ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಸ್ ಡಿಪಿಐ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಶೋಭಾ, ಎಸ್ ಡಿಪಿಐನವರು ಗ್ರಾಪಂ ಚುನಾವಣೆಯಲ್ಲಿ ಒಂದೆರಡು ಸ್ಥಾನ ಗಳಿಸಿದ್ದಕ್ಕೇ ಏನೇನು ಮಾತನಾಡುತ್ತಿದ್ದಾರೆ. ಎಸ್ ಡಿಪಿಐ ವಿಜಯೋತ್ಸವದಲ್ಲಿ ಅಂಥ ಘೋಷಣೆ ಕೇಳಿಬಂದಿದ್ದು ಪೊಲೀಸರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಿದ್ದಾರೆ. ಎಸ್ ಡಿಪಿಐನವರ ಉದ್ದೇಶ ಏನು, ಕಾರ್ಯ ಚಟುವಟಿಕೆ ಏನೆಂಬುದರ ಬಗ್ಗೆ ಸಾಮಾನ್ಯ ಜನರಿಗೂ ಗೊತ್ತಾಗಿದೆ. ಇನ್ನು ಬಿಜೆಪಿ ಕಾರ್ಯಕರ್ತರ ಬಾಯಲ್ಲಿ ಅಂಥ ಘೋಷಣೆ ಬರಲು ಸಾಧ್ಯವೇ ಇಲ್ಲ. ಅಂಥ ಭಾವನೆಯೇ ನಮ್ಮ ಕಾರ್ಯಕರ್ತರ ರಕ್ತದಲ್ಲಿ ಇರಲ್ಲ ಎಂದು ಹೇಳಿದರು.
Dk Shivakumar and Siddaramaiah are unable to withstand the goodness of BJP slams MP Shobha Karandlaje in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm