ಬ್ರೇಕಿಂಗ್ ನ್ಯೂಸ್
31-08-26 04:19 pm HK News Staffer ಕರಾವಳಿ
ಮಂಗಳೂರು, ಆಗಸ್ಟ್ 31: ನಗರದ ಪಾಂಡೇಶ್ವರದ ಶ್ರೀನಿವಾಸ ಕಾಲೇಜು ಎದುರಿನ ರೈಲ್ವೆ ಟ್ರ್ಯಾಕ್ ಸಮೀಪವಿರುವ ಮಿಜಾರ್ ಅಪಾರ್ಟ್ಮೆಂಟ್ನಲ್ಲಿ ತಡರಾತ್ರಿ ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದ ಅಸ್ಸೋಂ ಮೂಲದ ಯುವಕನೊಬ್ಬನನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಅಸ್ಸೋಂನ ಕೇಶವ್ (33) ಎಂಬಾತ ರಕ್ಷಣೆಗೊಳಗಾದ ಯುವಕ.
ಸೋಮವಾರ ನಸುಕಿನ ಜಾವ ಸುಮಾರು 2 ಗಂಟೆಯ ವೇಳೆಗೆ ಮಿಜಾರ್ ಅಪಾರ್ಟ್ಮೆಂಟ್ನ ಗ್ರೌಂಡ್ ಫ್ಲೋರ್ನಲ್ಲಿ ಲಿಫ್ಟ್ ತಾಂತ್ರಿಕ ದೋಷದಿಂದ ಏಕಾಏಕಿ ಸ್ಥಗಿತಗೊಂಡು ಕೇಶವ್ ಒಳಗೆ ಸಿಲುಕಿಕೊಂಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಅಗ್ನಿಶಾಮಕ ಠಾಣಾ ಸಿಬ್ಬಂದಿ ತುರ್ತಾಗಿ ಸ್ಥಳಕ್ಕೆ ಧಾವಿಸಿದರು. ಹಳೆಯ ಮಾದರಿಯ ಲಿಫ್ಟ್ ಆಗಿದ್ದರಿಂದ ಕೀ ಮೂಲಕ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ. ತಕ್ಷಣವೇ ಹೈಡ್ರಾಲಿಕ್ ಸ್ಪ್ರೆಡರ್ ಉಪಕರಣವನ್ನು ಬಳಸಿ ಲಿಫ್ಟ್ನ ಬಾಗಿಲನ್ನು ತೆರೆದು, ಒಳಗೆ ಸಿಲುಕಿದ್ದ ಯುವಕನನ್ನು ಯಾವುದೇ ಅಪಾಯವಿಲ್ಲದೆ ರಕ್ಷಣೆ ಮಾಡಲಾಯಿತು.
ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ (ASO) ಹರೀಶ್ಚಂದ್ರ, ಲೀಡಿಂಗ್ ಫೈರ್ಮ್ಯಾನ್ (LF) ಚಂದ್ರ, ಚಾಲಕ ಕಿರಣ್ ಹಾಗೂ ಸಿಬ್ಬಂದಿಗಳಾದ ರಮೇಶ್ ಮತ್ತು ಲಾಲ್ ಅಹಮದ್ ಭಾಗವಹಿಸಿದ್ದರು.
ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಪ್ರವೀಣ್ ಕೆ.ಎನ್ ಅವರು, " ಶ್ರೀನಿವಾಸ ಕಾಲೇಜು ಎದುರಿನ ರೈಲ್ವೆ ಟ್ರ್ಯಾಕ್ ಬಳಿಯ ಅಪಾರ್ಟ್ಮೆಂಟ್ನಲ್ಲಿ ರಾತ್ರಿ ಸುಮಾರು 2 ಗಂಟೆಗೆ ಲಿಫ್ಟ್ ಜಾಮ್ ಆಗಿರುವ ಬಗ್ಗೆ ಕರೆ ಬಂದಿತ್ತು. ಲಿಫ್ಟ್ ಹಳೆಯದಾಗಿದ್ದರಿಂದ ಕೀ ಮೂಲಕ ತೆರೆಯಲು ಸಾಧ್ಯವಾಗಲಿಲ್ಲ. ತಕ್ಷಣ ನಮ್ಮಲ್ಲಿದ್ದ ಹೈಡ್ರಾಲಿಕ್ ಸ್ಪ್ರೆಡರ್ ಬಳಸಿ ಲಿಫ್ಟ್ ಬಾಗಿಲು ತೆರೆದು ಗ್ರೌಂಡ್ ಫ್ಲೋರ್ನಲ್ಲಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಹೊರತರಲಾಯಿತು" ಎಂದು ತಿಳಿಸಿದರು.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
31-08-26 04:19 pm
HK News Staffer
ಮುಡಾ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ ;...
29-08-26 08:35 pm
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
31-08-26 03:48 pm
HK News Staffer
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm