ಬ್ರೇಕಿಂಗ್ ನ್ಯೂಸ್
03-09-26 09:10 pm HK News Staffer ಕರಾವಳಿ
ಮಂಗಳೂರು, ಸೆ.3 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ತಾನೇ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಮುಖಂಡ ಹಕೀಂ ಕೂರ್ನಡ್ಕ ಬಹಿರಂಗ ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ತಮಗೆ ಟಿಕೆಟ್ ಕೇಳುವುದಾಗಿಯೂ, ಪಕ್ಷ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿಯುವುದಾಗಿ ತಿಳಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಕ್ಷೇತ್ರದ ಶಾಸಕರ ಕಾರ್ಯವೈಖರಿ, ಕಾರ್ಯಕರ್ತರ ಕಡೆಗಣನೆ ಹಾಗೂ ತಮ್ಮ ಮೇಲೆ ನಡೆದಿರುವ ಬೆದರಿಕೆ-ದೌರ್ಜನ್ಯಗಳ ಕುರಿತು ವಾಗ್ದಾಳಿ ನಡೆಸಿದರು.
ನನಗೆ ಕೇವಲ ಒಂದು ಸಮುದಾಯದ ಮತಗಳಲ್ಲ, ಹಿಂದೂ ಬಾಂಧವರು, ನನ್ನ ಸಮುದಾಯದವರು ಹಾಗೂ ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಮತ ಹಾಕುತ್ತಾರೆ. ಪಕ್ಷಕ್ಕೆ ಹೊಸದಾಗಿ ಬಂದು, ಅಶೋಕ್ ರೈ ಶಾಸಕರಾಗಬಹುದಾದರೆ, ನಿಷ್ಠಾವಂತ ಕಾರ್ಯಕರ್ತನಾದ ನಾನು ಏಕೆ ಶಾಸಕನಾಗಬಾರದು? ಎಂದು ಅವರು ಪ್ರಶ್ನಿಸಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ಟಿಕೆಟ್ ನೀಡಿದರೆ, ಅವರ ಪರವಾಗಿ ನಿಂತು ಗೆಲ್ಲಿಸುತ್ತೇನೆ. ಆದರೆ ಸಂಘ ಪರಿವಾರ ಹಾಗೂ ಅಶೋಕ್ ರೈ ಅವರ ಬೆಂಬಲಿಗರಿಗೆ ಟಿಕೆಟ್ ನೀಡಿದರೆ ಕಾರ್ಯಕರ್ತರು ಬೆಂಬಲಿಸುವುದಿಲ್ಲ ಎಂದು ಹೇಳಿದರು. ತಾನು ಶಾಸಕನಾದ ನಂತರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಜರಾಯಿ ದೇವಸ್ಥಾನಗಳಿಗೆ ನೇಮಕಗೊಂಡಿದ್ದ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿಯನ್ನೇ ಮುಂದುವರಿಸಿದ್ದೇನೆ ಎಂದು ಅಶೋಕ್ ರೈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಸಮರ್ಥ ಹಿಂದೂ ಮುಖಂಡರು ಇರಲಿಲ್ಲವೇ? ಅಶೋಕ್ ರೈ ಅವರು ಕಾಂಗ್ರೆಸ್ ಶಾಸಕರೋ ಅಥವಾ ಬಿಜೆಪಿ ಶಾಸಕರೋ?" ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ವಿರುದ್ಧ ಪೋಸ್ಟರ್ಗಳನ್ನು ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ ಹಕೀಂ, "ಶಾಸಕರ ಕಚೇರಿಗೆ ಕಾಲಿಟ್ಟರೆ ಕೈ ಕಾಲು ಕಡಿಯುತ್ತೇವೆ ಎಂದು ಬೆದರಿಸಲಾಗಿದೆ. ಇದು ಕಾಂಗ್ರೆಸ್ ಸಂಸ್ಕೃತಿಯಲ್ಲ, ರೌಡಿಗಳ ಸಂಸ್ಕೃತಿ" ಎಂದರು. ಪುತ್ತೂರು ಪೊಲೀಸ್ ಇನ್ಸ್ಪೆಕ್ಟರ್ ಅವರು ಶಾಸಕರ ಪರವಾಗಿ ನಿಂತು, ತಮ್ಮ ವಿರುದ್ಧ ಮಾತನಾಡದಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದ ಅವರು, ಈ ಬಗ್ಗೆ ಎಸ್ಪಿ ಕಚೇರಿಗೆ ತೆರಳಿ ದೂರು ನೀಡುವುದಾಗಿ ತಿಳಿಸಿದರು.
ತನ್ನ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣದಲ್ಲಿ ನೀಡಿದ ದೂರಿನಲ್ಲಿ ಎ1 ಆರೋಪಿಯಾಗಿ ಅಶೋಕ್ ರೈ ಅವರ ಹೆಸರು ಪ್ರಸ್ತಾಪವಿದ್ದರೂ ಪೊಲೀಸರು ಅವರ ವಿರುದ್ಧ ಎಫ್ಐಆರ್ ದಾಖಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಹಕೀಂ ಕೂರ್ನಡ್ಕ, ಸಾಕ್ಷ್ಯಾಧಾರಗಳನ್ನು ಇಟ್ಟುಕೊಂಡು ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಹೇಳಿದರು.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
03-09-26 10:19 pm
HK News Staffer
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
03-09-26 09:51 pm
HK News Staffer
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm
ನೀಟ್ ಪರೀಕ್ಷೆ ಅಕ್ರಮ ; ಸುನಿಲ್ ಕುಮಾರ್ ರಾಜೀನಾಮೆಗೆ...
02-09-26 07:18 pm