ಬ್ರೇಕಿಂಗ್ ನ್ಯೂಸ್
12-08-20 10:02 am Bangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬೆಂಗಳೂರು ಗಲಭೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವೇ ಕಾರಣ ಕಾರಣವೆಂದು ಎಸ್ ಡಿ ಪಿ ಐ ಆರೋಪಿಸಿದೆ. ಬೆಂಗಳೂರು ಗಲಭೆ ಕುರಿತು ಪ್ರತಿಕ್ರಿಯಿಸಿರುವ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಗಲಭೆಗೆ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ನವೀನ್ ಎಂಬಾತ ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ್ದ. ಈ ಬಗ್ಗೆ ಸ್ಥಳೀಯ ಯುವಕರು ಪೊಲೀಸ್ ಠಾಣೆಗೆ ದೂರು ಕೊಟ್ರೂ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನವೀನ್, ಶಾಸಕ ಅಖಂಡ ಶ್ರೀನಿವಾಸ್ ರ ಸೋದರ ಅಳಿಯನಾಗಿರೋದ್ರಿಂದ ಪೊಲೀಸರು ಕ್ರಮ ಕೈಗೊಂಡಿಲ್ಲ. ಈ ಪರಿಣಾಮ ಮೊದಲೇ ಆಕ್ರೋಷದಿಂದ ಇದ್ದ ಜನ ಪೊಲೀಸರ ನಿರ್ಲಕ್ಷ್ಯದಿಂದ ರೊಚ್ಚಿಗೆದ್ದಿದ್ದಾರೆ. ಇದೇ ಘರ್ಷಣೆಗೆ ಕಾರಣ ಎಂದು ಅವರು ಆರೋಪಿಸಿದರು.
ಈ ಅಹಿತಕರ ಘಟನೆಗೆ ಹಾಗೂ ಮೂರು ಜೀವ ಬಲಿಯಾಗಲು ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಕಿಡಿಕಾರಿದ ಅವರು ಘಟನೆಗೆ ನವೀನ್ ಎಂಬಾತನ ಕೋಮು ಪ್ರಚೋದನಾ ಫೇಸ್ ಬುಕ್ ಪೋಸ್ಟ್ ಕಾರಣ ಎಂದು ಅವರು ದೂರಿದರು.
ಎಸ್ ಡಿ ಪಿ ಐ ಮುಖಂಡರು ಪೊಲೀಸರ ಜೊತೆ ಸೇರಿ ಜನರನ್ನು ಸಮಾಧಾನಪಡಿಸಿದ್ದಾರೆ. ಆದರೆ ಗಲಭೆ ನಿಯಂತ್ರಿಸಲು ಬಂದ ಮುಝಮಿಲ್ ಪಾಷರನ್ನು ಪೊಲೀಸರು ಬಂಧಿಸಿದ್ದಾರೆ.ಇದು ಪೊಲೀಸರ ಹಾಗೂ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಯತ್ನ ಎಂದು ಅವರು ಆರೋಪಿಸಿದರು.
ಮಾಮೂಲಿಯಂತೆ ಎಸ್ ಡಿ ಪಿ ಐಯನ್ನು ಗಲಭೆಗೆ ಎಳೆದು ತರುವ ಪ್ರಯತ್ನ ನಡೆದಿದೆ. ಜನರು ಯಾರೂ ಅಪಪ್ರಚಾರವನ್ನು ಗಣನೆಗೆ ತೆಗೆಯಬಾರದು. ಎಸ್ ಡಿ ಪಿ ಐ ಯಾವುತ್ತೂ ನ್ಯಾಯ,ನೀತಿ,ಅಭಿವೃದ್ಧಿ ಪರ ಇರುತ್ತದೆ ಎಂದು ಅವರು ಹೇಳಿದರು.
Video:
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm