ಬ್ರೇಕಿಂಗ್ ನ್ಯೂಸ್
09-01-21 04:50 pm Mangalore Correspondent ಕರಾವಳಿ
ಮಂಗಳೂರು, ಜ.9: ಸಾಮಾನ್ಯವಾಗಿ ಮೀನುಗಾರಿಕಾ ಬೋಟ್ ಗಳನ್ನು ರಿಪೇರಿ ಮಾಡಲು ನೀರಿನಿಂದ ಮೇಲಕ್ಕೆ ಎಳೆದು ತರಲೇಬೇಕು. ಬೋಟ್ ಅಡಿಭಾಗದಲ್ಲಿ ತೊಂದರೆಗಳಾದರೆ ನೀರಿನಲ್ಲಿ ಮುಳುಗಿ ಸರಿಪಡಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಈಗ ಅಂಥದ್ದೊಂದು ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿದ್ದು, ಮಂಗಳೂರಿನಲ್ಲಿ ಮೊದಲ ಬಾರಿಗೆ ಅಂಡರ್ ವಾಟರ್ ಗ್ಯಾರೇಜ್ ಒಂದನ್ನು ಕಾರ್ಯರೂಪಕ್ಕೆ ತರಲಾಗಿದೆ.

ಮೀನುಗಾರಿಕಾ ಬೋಟ್ ಅಡಿಭಾಗದಲ್ಲಿ ಹೆಚ್ಚಾಗಿ ಕಪ್ಪೆ ಚಿಪ್ಪುಗಳು ಮುತ್ತಿಕೊಂಡಿರುತ್ತವೆ. ಅಲ್ಲಿನ ಲೋಹದ ಪ್ರೊಪೆಲ್ಲರ್ ಮತ್ತು ಅಡಿಭಾಗದಲ್ಲಿರುವ ಪದರಕ್ಕೆ ಚಿಪ್ಪುಗಳು ಅಂಟಿಕೊಂಡು ನಿಂತರೆ, ಸಮುದ್ರ ನೀರಿನಲ್ಲಿ ಬೋಟ್ ಸಾಗುವುದಕ್ಕೆ ಅಡ್ಡಿಯಾಗುತ್ತವೆ. ಬೋಟಿನ ವೇಗಕ್ಕೆ ತಡೆಯಾಗಿ, ಹೆಚ್ಚು ಡೀಸೆಲ್ ಖರ್ಚಾಗುತ್ತದೆ. ಅದಲ್ಲದೆ, ಅಡಿಭಾಗದಲ್ಲಿ ಪ್ರೊಪೆಲ್ಲರ್ ಅಥವಾ ಇನ್ನಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ, ಸುಲಭದಲ್ಲಿ ಸರಿಪಡಿಸಲು ಸಾಧ್ಯವಾಗುತ್ತಿರಲಿಲ್ಲ. ಇಂಥ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಸರಿಪಡಿಸುವ ತಂತ್ರಜ್ಞರು ಬೇಕಾಗುತ್ತದೆ. ಆದರೆ, ಈಗ ಅಸ್ತಿತ್ವಕ್ಕೆ ಬಂದಿರುವ ಗ್ಯಾರೇಜ್ ನಲ್ಲಿ ಸ್ಕೂಬಾ ಡೈವರ್ ಗಳ ರೀತಿ ನೀರಿನಲ್ಲಿ ಮುಳುಗಿಕೊಂಡೇ ಬೋಟ್ ಗಳನ್ನು ಸರಿಪಡಿಸಲಾಗುತ್ತದೆ.

ಮಂಗಳೂರಿನ ಮೀನುಗಾರಿಕಾ ಉದ್ಯಮಿ ರಾಜರತ್ನ ಸನಿಲ್, ಬೋಟ್ ಮಾಲಕರ ಸಂಕಷ್ಟವನ್ನು ಮನಗಂಡೇ ಹೊಸ ಮಾದರಿಯ ತಂತ್ರಜ್ಞಾನವನ್ನು ಮಂಗಳೂರಿಗೆ ತಂದಿದ್ದಾರೆ. ಅದಕ್ಕಾಗಿ ಇಬ್ಬರು ಸಿಬಂದಿಯನ್ನು ನೇಮಕ ಮಾಡಿದ್ದಾರೆ. ಉಸಿರಾಟಕ್ಕೆ ಆಕ್ಸಿಜನ್ ಸಿಲಿಂಡರ್ ಮತ್ತು ದೇಹ ಮುಚ್ಚುವ ಜಾಕೆಟ್ ಅನ್ನು ರೆಡಿ ಮಾಡಿದ್ದಾರೆ. ಇದನ್ನು ಧರಿಸಿಕೊಂಡು ಸಿಬಂದಿ, ಬೋಟ್ ನೀರಿನಲ್ಲಿ ಇರುವಾಗಲೇ ಅಡಿಭಾಗಕ್ಕೆ ತೆರಳಿ ತೊಂದರೆಗಳನ್ನು ಸರಿಪಡಿಸುತ್ತಾರೆ. ಕೇವಲ ಕಪ್ಪೆ ಚಿಪ್ಪುಗಳು ಅಂಟಿಕೊಂಡು ತೊಂದರೆಗಳಾಗಿದ್ದರೆ, ಅದನ್ನು ಮೂರು ಗಂಟೆಯಲ್ಲಿ ತೆರವು ಮಾಡುತ್ತಾರೆ. ಇತರೇ ತಾಂತ್ರಿಕ ತೊಂದರೆಗಳಿದ್ದಲ್ಲಿ ತಂತ್ರಜ್ಞಾನ ಅನುಸರಿಸಿಕೊಂಡು ಸಮಯ ಬೇಕಾಗುತ್ತದೆ. ಒಂದು ಸಲ ಬೋಟ್ ಅಡಿಭಾಗವನ್ನು ಪೂರ್ತಿ ಕ್ಲೀನ್ ಮಾಡುವುದಕ್ಕೆ 20 ಸಾವಿರ ರೂ. ಚಾರ್ಜ್ ಮಾಡುತ್ತೇವೆ ಎನ್ನುತ್ತಾರೆ, ರಾಜರತ್ನ ಸನಿಲ್.
ದೊಡ್ಡ ಬೋಟ್ ಗಳನ್ನು ನೀರಿನಿಂದ ಮೇಲಕ್ಕೆಳೆದು ಸರಿಪಡಿಸಬೇಕಿದ್ದರೆ, ಒಂದೂವರೆ ಲಕ್ಷ ಖರ್ಚು ತಗಲುತ್ತದೆ. ಕಾರ್ಮಿಕರು ಮತ್ತು ದೊಡ್ಡ ಬೋಟ್ ಗಳನ್ನು ಮೇಲಕ್ಕೆಳೆಯುವ ಕ್ರೇನ್ ಇನ್ನಿತರ ಕಾರಣಕ್ಕೆ ಭಾರೀ ಖರ್ಚು ಬೇಕಾಗುವುದರಿಂದ ವರ್ಷಕ್ಕೊಮ್ಮೆ ಅಥವಾ ಎರಡು ವರ್ಷಕ್ಕೊಮ್ಮೆ ಈ ರೀತಿಯ ಕೆಲಸ ಮಾಡುತ್ತಾರೆ. ಆದರೆ, ಈಗ ಸ್ಕೂಬಾ ಡೈವರ್ ಗಳು ಬಂದ ಬಳಿಕ ಸಣ್ಣಮಟ್ಟಿನ ತೊಂದರೆಗಳಿಗೆ ಬೋಟ್ ಗಳನ್ನು ಮೇಲಕ್ಕೆಳೆಯುವ ಅಗತ್ಯ ಬೀಳಲ್ಲ.

ಆರು ತಿಂಗಳ ತರಬೇತಿ ಅಗತ್ಯ
ಸಾಮಾನ್ಯ ಈಜುಗಾರರಿಗೆ ಈ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ. ನೀರಿನ ಅಡಿಭಾಗದಲ್ಲಿ ಒಂದೂವರೆ ಗಂಟೆ ಕಾಲ ನಿಂತು ಕೆಲಸ ಮಾಡಲು ಸೂಕ್ತ ತರಬೇತಿ ಬೇಕಾಗುತ್ತದೆ. ನುರಿತ ತಂತ್ರಜ್ಞರಿಂದ ಸ್ಕೂಬಾ ಡೈವಿಂಗ್ ಟ್ರೈನಿಂಗ್ ಮತ್ತು ಬೋಟ್ ಅಡಿಭಾಗದಲ್ಲಿ ನೀರಿನಲ್ಲೇ ಇದ್ದುಕೊಂಡು ರಿಪೇರಿ ಮಾಡಲು ತರಬೇತಿಯನ್ನು ನೀಡಲಾಗುತ್ತದೆ. ಸ್ವತಃ ರಾಜರತ್ನ ಸನಿಲ್ ಕೂಡ ಈ ತರಬೇತಿಯನ್ನು ಪಡೆದಿದ್ದು, ತನ್ನ ಬಳಗದ ಐವರಿಗೆ ತರಬೇತಿ ನೀಡಿದ್ದಾರೆ. ಈಗ ಇಬ್ಬರು ಸಿಬಂದಿಯನ್ನು ರೆಡಿ ಮಾಡಿ, ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ ಗ್ಯಾರೇಜ್ ಆರಂಭಿಸಿದ್ದಾರೆ. ಅಂದಹಾಗೆ, ಬೋಟ್ ನೀರಿನಲ್ಲಿ ನಿಂತಿರುವಾಗಲೇ ಅಡಿಭಾಗದಲ್ಲಿ ಕೆಲಸ ಮಾಡುವ ಬೋಟ್ ಗ್ಯಾರೇಜ್ ಕರಾವಳಿಯಲ್ಲಿ ಮೊದಲ ಬಾರಿಗೆ ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಅಸ್ತಿತ್ವಕ್ಕೆ ಬಂದಿದೆ.
Trained Scooba Divers are Ready to Repair Fishing Boats in Underwater Garage at Mangalore Fish Port
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm