ಬ್ರೇಕಿಂಗ್ ನ್ಯೂಸ್
15-09-26 05:27 pm HK News Staffer ಕರಾವಳಿ
ಮಂಗಳೂರು, ಸೆ.15: ನಗರದಲ್ಲಿ ಇಂದು ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪರಿಶೀಲನಾ ಸಭೆಗೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಗೈರಾಗಿದ್ದಕ್ಕೆ ಸಚಿವ ಯು.ಟಿ. ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭೆಗೆ ಮಾಹಿತಿ ನೀಡದೆ ಗೈರಾದ ಅಧಿಕಾರಿಗಳ ವಿರುದ್ಧ ಖಡಕ್ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಕೆಡಿಪಿ ಸಭೆಗೆ ಕಮಿಷನರ್ ಗೈರಾಗಿರುವ ವಿಚಾರ ಪ್ರಸ್ತಾಪವಾಗುತ್ತಿದ್ದಂತೆ ಅಧಿಕಾರಿಗಳ ವಿರುದ್ಧ ಗರಂ ಆದ ಯು.ಟಿ. ಖಾದರ್, “ನಿಯಮದ ಬಗ್ಗೆ ಮಾತನಾಡುವವರು ನಿಯಮ ಪಾಲಿಸೋದು ಬೇಡ್ವಾ? ನನಗೆ ಯಾವುದೇ ಮಾಹಿತಿ ನೀಡದೆ ಸಭೆಗೆ ಯಾಕೆ ಬಂದಿಲ್ಲ?” ಎಂದು ಪ್ರಶ್ನಿಸಿದ್ದಾರೆ.
‘ಒಂದು ದಿನ ಮುಂಚಿತವಾಗಿ ಮಾಹಿತಿ ನೀಡಬೇಕು’
ಯಾವುದೇ ಅಧಿಕಾರಿ ಕೆಡಿಪಿ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದರೆ, ಸಭೆಗೆ ಕನಿಷ್ಠ ಒಂದು ದಿನ ಮುಂಚಿತವಾಗಿ ಪತ್ರದ ಮೂಲಕ ತಮಗೆ ಅಥವಾ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಖಾದರ್ ಸ್ಪಷ್ಟ ಸೂಚನೆ ನೀಡಿದ್ದಾರೆ. “ಸಭೆಗೆ ಗೈರಾಗಬೇಕಾದ ಸಂದರ್ಭವಿದ್ದರೆ ಮುಂಚಿತವಾಗಿಯೇ ಮಾಹಿತಿ ನೀಡುವುದು ಕಡ್ಡಾಯ. ಅಧಿಕಾರಿಗಳು ತಮ್ಮ ಗೈರುಹಾಜರಿಯ ಬಗ್ಗೆ ಕಾರಣವನ್ನು ತಿಳಿಸಿ ಅನುಮತಿ ಪಡೆಯಬೇಕು” ಎಂದು ಅವರು ಹೇಳಿದ್ದಾರೆ.
ಮಾಹಿತಿ ನೀಡದೆ ಗೈರಾದರೆ ಗಂಭೀರ ಕ್ರಮ
ಮುಂದಿನ ದಿನಗಳಲ್ಲಿ ಯಾವುದೇ ಅಧಿಕಾರಿ ಕೆಡಿಪಿ ಸಭೆಗೆ ಗೈರಾಗುವಂತಿದ್ದರೆ, ಕಾರಣವನ್ನು ಮುಂಚಿತವಾಗಿ ತಿಳಿಸಬೇಕು. ಯಾವುದೇ ಮಾಹಿತಿ ನೀಡದೆ ಸಭೆಗೆ ಗೈರಾದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಯು.ಟಿ. ಖಾದರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಪ್ರಮುಖ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಯುವ ಕೆಡಿಪಿ ಸಭೆಗೆ ಜವಾಬ್ದಾರಿಯುತ ಅಧಿಕಾರಿಗಳು ಗೈರಾಗುವುದು ಸರಿಯಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಗೈರುಹಾಜರಿ ಹಾಗೂ ಈ ವಿಚಾರದಲ್ಲಿ ಯು.ಟಿ. ಖಾದರ್ ನೀಡಿದ ಖಡಕ್ ಎಚ್ಚರಿಕೆ ಇದೀಗ ಕೆಡಿಪಿ ಸಭೆಯ ಪ್ರಮುಖ ಚರ್ಚೆಯ ವಿಷಯವಾಗಿದೆ.
U.T. Khader expressed strong displeasure over Police Commissioner Sudheer Kumar Reddy’s absence from the quarterly Karnataka Development Programme (KDP) review meeting held in the city on Monday. He also warned of strict action against officials who remain absent without prior intimation.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm