ಬ್ರೇಕಿಂಗ್ ನ್ಯೂಸ್
10-01-21 03:22 pm Udupi Correspondent ಕರಾವಳಿ
ಕುಂದಾಪುರ, ಜ.10: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಿನ್ನೆ ನಡೆದ ಕಾರುಗಳ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಕುಂದಾಪುರ ಮೂಲದ ದಂಪತಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಕಾರು ಚಲಾಯಿಸುತ್ತಿದ್ದ ಕುಂದಾಪುರ ತಾಲೂಕಿನ ಕೋಡಿ ನಿವಾಸಿ ನಾಗೇಂದ್ರ ಶೇರಿಗಾರ್(32), ಅವರ ಸಂಬಂಧಿಕ ಅನಿಲ್ ಶೇರಿಗಾರ್ (35) ಮತ್ತು ಅವರ ಪತ್ನಿ ಸುಜಾತಾ(29) ಮೃತರು.
ತರೀಕೆರೆಯ ರಂಗೇನಹಳ್ಳಿಯ ನೇರ ರಸ್ತೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಬಿಳಿ ಬಣ್ಣದ ವೆರ್ನಾ ಮತ್ತು ಎರ್ಟಿಕಾ ಕಾರು ಮುಖಾಮುಖಿ ಡಿಕ್ಕಿಯಾಗಿತ್ತು. ತೀವ್ರ ಗಾಯಗೊಂಡ ನಾಗೇಂದ್ರ, ಅನಿಲ್ ಮತ್ತು ಸುಜಾತಾ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಮೂವರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅನಿಲ್ ದಂಪತಿಯ ಒಂದೂವರೆ ವರ್ಷದ ಮಗು ಕನ್ನಿಕಾ ಯಾವುದೇ ಅಪಾಯಗಳಿಲ್ಲದೆ ಪಾರಾಗಿದೆ. ಇನ್ನೊಂದು ಕಾರಿನಲ್ಲಿದ್ದ ಕಿರಣ್ ತೀವ್ರ ಗಾಯಗೊಂಡಿದ್ದರೆ, ಅವರ ಜೊತೆಗಿದ್ದ ಅಶ್ವಥ್ ಮತ್ತು ನಾಗರಾಜ್ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದರು.

ಕುಂದಾಪುರ ಮೂಲದ ನಾಗೇಂದ್ರ ಬೆಂಗಳೂರಿನಲ್ಲಿ ಹೊಟೇಲ್ ಹೊಂದಿದ್ದು, ಕೋಡಿ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ನಿಮಿತ್ತ ಊರಿಗೆ ಬಂದಿದ್ದರು. ಅನಿಲ್ ಕೂಡ ಬೆಂಗಳೂರಿನಲ್ಲಿ ಇಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದು, ಇದೇ ವೇಳೆಗೆ ಪತ್ನಿ ಮತ್ತು ಮಗುವಿನ ಜೊತೆ ಊರಿಗೆ ಬಂದಿದ್ದರು. ಅನಿಲ್ ಬೆಂಗಳೂರಿಗೆ ತೆರಳಲು ರೈಲಿನಲ್ಲಿ ಟಿಕೆಟ್ ಮಾಡಿದ್ದು ಹೋಗುವುದಕ್ಕೆ ರೆಡಿಯಾಗಿದ್ದರು. ಇದೇ ವೇಳೆ, ಜೊತೆಯಾಗಿದ್ದ ನಾಗೇಂದ್ರ ಹೇಗೂ ಕಾರಿನಲ್ಲಿ ಒಬ್ಬನೇ ಹೋಗುತ್ತಿದ್ದೇನೆ. ಜೊತೆಗೆ ಬನ್ನಿ ಎಂದು ಅನಿಲ್ ದಂಪತಿಯನ್ನು ಕಾರಿನಲ್ಲಿ ಕರೆದೊಯ್ದಿದ್ದರು ಎಂದು ಕೋಡಿಯ ಕುಟುಂಬಸ್ಥರು ಹೇಳುತ್ತಿದ್ದಾರೆ. ಹೀಗಾಗಿ ಕೋಡಿಯಲ್ಲಿ ಈಗ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ನಿನ್ನೆ ಸಂಜೆ ವೇಳೆಗೆ ಅಪಘಾತ ನಡೆದಿದ್ದು, ನಾಗೇಂದ್ರ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದರೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ರಾತ್ರಿ ವೇಳೆಗೆ ದಂಪತಿ ಸಾವು ಕಂಡಿದ್ದರು. ಪೋಸ್ಟ್ ಮಾರ್ಟಂ ಬಳಿಕ ಇಂದು ಕುಂದಾಪುರಕ್ಕೆ ಮೃತದೇಹ ರವಾನೆಯಾಗಿದೆ. ತರೀಕೆರೆಯ ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತಿ ವೇಗದ ಚಾಲನೆ ಮೂವರ ಪ್ರಾಣವನ್ನು ಕಸಿದಿದೆ ಎನ್ನುವ ಮಾತನ್ನು ಜನರಾಡಿಕೊಳ್ಳುತ್ತಿದ್ದಾರೆ.
Three people from Kundapur, including a couple, died in a tragic accident that occurred at Rangenahalli of Tarikere in Chikkamagalur district on Saturday, January 9. The couple's young child survived.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am