ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am