ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಹಿಂದೂ ದಲಿತ ಶಾಸಕನ ಮೇಲೆ ಮತಾಂಧರ ಹಲ್ಲೆ , ಗೋಲಿಬಾರ್ ಸರಿಯಾದ ಕ್ರಮ:  ಡಾ.ಭರತ್ ಶೆಟ್ಟಿ

12-08-20 02:39 pm       Mangalore Reporter   ಕರಾವಳಿ

ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.

ಮಂಗಳೂರು ಆಗಸ್ಟ್ 12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕರ್ಮಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.

ಮತಾಂಧರು ಮಹಿಳೆ ಪೊಲೀಸ್ ಸಿಬ್ಬಂದಿಗಳೂ ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಬೆಂಕಿ ಹಚ್ಚಿ ಸಾಯಿಸಲು ಮುಂದಾಗಿದ್ದರು. ದಲಿತ ಹಿಂದೂ ಶಾಸಕನ ಮನೆ,ಆಸ್ತಿ ಹಾನಿ ಮಾಡಿದ್ದಾರೆ. ಇಂತಹವರ ವಿರುದ್ದ ಕ್ಷಮೆಯಿಲ್ಲದ ಕಠಿಣ ಕ್ರಮ ಅಗತ್ಯ. 

ಈ ಗಲಭೆ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದರ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ. ಮತಾಂಧರನ್ನು ಗುರುತಿಸಿ ಅವರಿಂದ ಆಸ್ತಿ ನಷ್ಟದ ಪರಿಹಾರ ವಶಕ್ಕೆ ಪಡೆಯಬೇಕು. ಇದರ ಜತೆ ಹಿಂದೂಗಳ ಆರಾಧ್ಯ ದೇವನಾದ ಶ್ರೀಕೃಷ್ಣನನ್ನು ಅತ್ಯಾಚಾರಿ ಎಂದು ಬಿಂಬಿಸಿದ್ದು ಎಷ್ಟು ಸರಿ. ಇದರ ಮೇಲೆ ಕೂಲಂಕುಷ ತನಿಖೆಯಾಗಬೇಕಿದೆ.

ಕಾನೂನು, ಪೊಲೀಸ್ ಇಲಾಖೆ ಇರುವಾಗ ತಪ್ಪಿತಸ್ಥರ ವಿರುದ್ದ ದೂರು ನೀಡಿ ಒತ್ತಾಯಿಸುವ ಬದಲು ಏಕಾ ಏಕಿ ಗುಂಪು ಸೇರಿ ಶಾಸಕರ ಮನೆ ಮೇಲೆ, ಇದೀಗ ಕೊರೊನಾ ವೈರಸ್ ವಿರುದ್ದ ಸೆಣೆಸುತ್ತಾ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿರುವ  ಕಾನೂನು ವಾರಿಯರ್ಸ್ ಆದ ಪೊಲೀಸರ ಮೇಲೆ, ಇಲಾಖೆಯ ವಾಹನಗಳ ಮೇಲೆ ಬೆಂಕಿ ಹಚ್ಚಿ ಮತಾಂಧರು ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.

ಮಾಜಿ ಸಚಿವ ಯು.ಟಿ ಖಾದರ್ ಎಸ್ಡಿಪಿಐ ಬಿಜೆಪಿಯ ರಾಜಕೀಯ ದಾಳ ಎಂದಿದ್ದಾರೆ. ಆದರೆ ದಲಿತ ಶಾಸಕನನ್ನು ನಿಂದಿಸಿ ಅವರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಮೌನ ಏಕೆ ? ಯು.ಟಿ ಖಾದರ್ ಮೊದಲು ಮತಾಂಧರ ಶಕ್ತಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಿ ಎಂದು ಅವರು ತಿರುಗೇಟು ನೀಡಿದ್ದಾರೆ.