ಬ್ರೇಕಿಂಗ್ ನ್ಯೂಸ್
12-08-20 02:39 pm Mangalore Reporter ಕರಾವಳಿ
ಮಂಗಳೂರು ಆಗಸ್ಟ್ 12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕರ್ಮಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.
ಮತಾಂಧರು ಮಹಿಳೆ ಪೊಲೀಸ್ ಸಿಬ್ಬಂದಿಗಳೂ ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಬೆಂಕಿ ಹಚ್ಚಿ ಸಾಯಿಸಲು ಮುಂದಾಗಿದ್ದರು. ದಲಿತ ಹಿಂದೂ ಶಾಸಕನ ಮನೆ,ಆಸ್ತಿ ಹಾನಿ ಮಾಡಿದ್ದಾರೆ. ಇಂತಹವರ ವಿರುದ್ದ ಕ್ಷಮೆಯಿಲ್ಲದ ಕಠಿಣ ಕ್ರಮ ಅಗತ್ಯ.
ಈ ಗಲಭೆ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದರ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ. ಮತಾಂಧರನ್ನು ಗುರುತಿಸಿ ಅವರಿಂದ ಆಸ್ತಿ ನಷ್ಟದ ಪರಿಹಾರ ವಶಕ್ಕೆ ಪಡೆಯಬೇಕು. ಇದರ ಜತೆ ಹಿಂದೂಗಳ ಆರಾಧ್ಯ ದೇವನಾದ ಶ್ರೀಕೃಷ್ಣನನ್ನು ಅತ್ಯಾಚಾರಿ ಎಂದು ಬಿಂಬಿಸಿದ್ದು ಎಷ್ಟು ಸರಿ. ಇದರ ಮೇಲೆ ಕೂಲಂಕುಷ ತನಿಖೆಯಾಗಬೇಕಿದೆ.
ಕಾನೂನು, ಪೊಲೀಸ್ ಇಲಾಖೆ ಇರುವಾಗ ತಪ್ಪಿತಸ್ಥರ ವಿರುದ್ದ ದೂರು ನೀಡಿ ಒತ್ತಾಯಿಸುವ ಬದಲು ಏಕಾ ಏಕಿ ಗುಂಪು ಸೇರಿ ಶಾಸಕರ ಮನೆ ಮೇಲೆ, ಇದೀಗ ಕೊರೊನಾ ವೈರಸ್ ವಿರುದ್ದ ಸೆಣೆಸುತ್ತಾ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿರುವ ಕಾನೂನು ವಾರಿಯರ್ಸ್ ಆದ ಪೊಲೀಸರ ಮೇಲೆ, ಇಲಾಖೆಯ ವಾಹನಗಳ ಮೇಲೆ ಬೆಂಕಿ ಹಚ್ಚಿ ಮತಾಂಧರು ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್ ಎಸ್ಡಿಪಿಐ ಬಿಜೆಪಿಯ ರಾಜಕೀಯ ದಾಳ ಎಂದಿದ್ದಾರೆ. ಆದರೆ ದಲಿತ ಶಾಸಕನನ್ನು ನಿಂದಿಸಿ ಅವರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಮೌನ ಏಕೆ ? ಯು.ಟಿ ಖಾದರ್ ಮೊದಲು ಮತಾಂಧರ ಶಕ್ತಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಿ ಎಂದು ಅವರು ತಿರುಗೇಟು ನೀಡಿದ್ದಾರೆ.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm