ಬ್ರೇಕಿಂಗ್ ನ್ಯೂಸ್
11-01-21 10:30 pm Mangaluru Correspondent ಕರಾವಳಿ
ಉಳ್ಳಾಲ, ಜ.11: ವಾರದ ಹಿಂದೆ ತೊಕ್ಕೊಟ್ಟಿನಲ್ಲಿ ಟೈಲರ್ ವೃತ್ತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ತಲೆಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ರಿಕ್ಷಾ ಚಾಲಕನೊಬ್ಬ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ. ಮಹಿಳೆಯ ಸ್ಥಿತಿ ಶಂಕೆಗೆ ಕಾರಣವಾಗಿದ್ದರಿಂದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಿಕ್ಷಾ ಚಾಲಕ ಚೆಂಬುಗುಡ್ಡೆ ನಿವಾಸಿ ಸಾಧಿಕ್ (25) ನನ್ನು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.

ತೊಕ್ಕೊಟ್ಟು ಕೇಂದ್ರ ಬಸ್ಸು ತಂಗುದಾಣದ ಬಳಿಯ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಂಬ್ಲಮೊಗರಿನ ತಾರಿಗುಡ್ಡೆ ನಿವಾಸಿ ದಿನೇಶ್ ಎಂಬವರ ಪತ್ನಿ ಶೋಭಾ (30) ಕಳೆದ ಜ.5 ರಂದು ತೊಕ್ಕೊಟ್ಟಿನಿಂದ ಬಸ್ಸಿನಲ್ಲಿ ಹೊರಟವರು ಮನೆಗೆ ಬಂದಿರಲಿಲ್ಲ. ಮನೆ ಮಂದಿಗೆ ಶೋಭಾ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆಸ್ಪತ್ರೆಯಿಂದಲೇ ಮಾಹಿತಿ ಬಂದಿತ್ತು. ಶೋಭಾ ಬಳಿಯಿದ್ದ ಐಡಿ ಕಾರ್ಡಿನ ವಿಳಾಸದ ಮೂಲಕ ಮನೆಮಂದಿಗೆ ಮಾಹಿತಿ ನೀಡಲಾಗಿತ್ತು. ಮನೆಮಂದಿ ಆಸ್ಪತ್ರೆಗೆ ಬರುವಷ್ಟರಲ್ಲಿ ಶೋಭಾ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದರು. ಈ ಕುರಿತು ಆಸ್ಪತ್ರೆಯಲ್ಲಿ ವಿಚಾರಿಸಿದಾಗ ರಿಕ್ಷಾ ಚಾಲಕ ಗಾಯಾಳು ಮಹಿಳೆಯನ್ನು ತಂದು ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ಮುಟ್ಟಿಸಿ ತೆರಳಿದ್ದಾನೆಂದು ತಿಳಿದುಬಂದಿತ್ತು.
ಆಸ್ಪತ್ರೆ ಸಿಬಂದಿ ಗಾಯಾಳು ಮಹಿಳೆಯನ್ನು ತಕ್ಷಣ ದಾಖಲಿಸಿಕೊಂಡು ಚಿಕಿತ್ಸೆ ಆರಂಭಿಸಿದ್ದರು. ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿ ಅಪಘಾತ ನಡೆಸಿದೆ ಎನ್ನಲಾದ ವಾಹನಕ್ಕಾಗಿ ಶೋಧ ಮುಂದುವರಿಸಿದ್ದರು. ಆಸ್ಪತ್ರೆಯ ಸಿಸಿಟಿವಿ ಆಧಾರದಲ್ಲಿ ಇದೀಗ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
In the case where a 30-year-old woman identified as Shobha was mysteriously injured at Deralakatte, the police on Monday, January 11 arrested the auto-rickshaw driver.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm