ಬ್ರೇಕಿಂಗ್ ನ್ಯೂಸ್
11-01-21 10:30 pm Mangaluru Correspondent ಕರಾವಳಿ
ಉಳ್ಳಾಲ, ಜ.11: ವಾರದ ಹಿಂದೆ ತೊಕ್ಕೊಟ್ಟಿನಲ್ಲಿ ಟೈಲರ್ ವೃತ್ತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ತಲೆಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ರಿಕ್ಷಾ ಚಾಲಕನೊಬ್ಬ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ. ಮಹಿಳೆಯ ಸ್ಥಿತಿ ಶಂಕೆಗೆ ಕಾರಣವಾಗಿದ್ದರಿಂದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಿಕ್ಷಾ ಚಾಲಕ ಚೆಂಬುಗುಡ್ಡೆ ನಿವಾಸಿ ಸಾಧಿಕ್ (25) ನನ್ನು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.

ತೊಕ್ಕೊಟ್ಟು ಕೇಂದ್ರ ಬಸ್ಸು ತಂಗುದಾಣದ ಬಳಿಯ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಂಬ್ಲಮೊಗರಿನ ತಾರಿಗುಡ್ಡೆ ನಿವಾಸಿ ದಿನೇಶ್ ಎಂಬವರ ಪತ್ನಿ ಶೋಭಾ (30) ಕಳೆದ ಜ.5 ರಂದು ತೊಕ್ಕೊಟ್ಟಿನಿಂದ ಬಸ್ಸಿನಲ್ಲಿ ಹೊರಟವರು ಮನೆಗೆ ಬಂದಿರಲಿಲ್ಲ. ಮನೆ ಮಂದಿಗೆ ಶೋಭಾ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆಸ್ಪತ್ರೆಯಿಂದಲೇ ಮಾಹಿತಿ ಬಂದಿತ್ತು. ಶೋಭಾ ಬಳಿಯಿದ್ದ ಐಡಿ ಕಾರ್ಡಿನ ವಿಳಾಸದ ಮೂಲಕ ಮನೆಮಂದಿಗೆ ಮಾಹಿತಿ ನೀಡಲಾಗಿತ್ತು. ಮನೆಮಂದಿ ಆಸ್ಪತ್ರೆಗೆ ಬರುವಷ್ಟರಲ್ಲಿ ಶೋಭಾ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದರು. ಈ ಕುರಿತು ಆಸ್ಪತ್ರೆಯಲ್ಲಿ ವಿಚಾರಿಸಿದಾಗ ರಿಕ್ಷಾ ಚಾಲಕ ಗಾಯಾಳು ಮಹಿಳೆಯನ್ನು ತಂದು ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ಮುಟ್ಟಿಸಿ ತೆರಳಿದ್ದಾನೆಂದು ತಿಳಿದುಬಂದಿತ್ತು.
ಆಸ್ಪತ್ರೆ ಸಿಬಂದಿ ಗಾಯಾಳು ಮಹಿಳೆಯನ್ನು ತಕ್ಷಣ ದಾಖಲಿಸಿಕೊಂಡು ಚಿಕಿತ್ಸೆ ಆರಂಭಿಸಿದ್ದರು. ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿ ಅಪಘಾತ ನಡೆಸಿದೆ ಎನ್ನಲಾದ ವಾಹನಕ್ಕಾಗಿ ಶೋಧ ಮುಂದುವರಿಸಿದ್ದರು. ಆಸ್ಪತ್ರೆಯ ಸಿಸಿಟಿವಿ ಆಧಾರದಲ್ಲಿ ಇದೀಗ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
In the case where a 30-year-old woman identified as Shobha was mysteriously injured at Deralakatte, the police on Monday, January 11 arrested the auto-rickshaw driver.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm