ಬ್ರೇಕಿಂಗ್ ನ್ಯೂಸ್
11-01-21 11:00 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಎಷ್ಟು ಸ್ಥಾನಕ್ಕೆ ಬದಲಾವಣೆ ಆಗಲಿದೆ, ಇವೆಲ್ಲವನ್ನು ರಾಜ್ಯ ಹಾಗು ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ಜನವರಿ 13 ರಂದು ಇವೆಲ್ಲ ವಿಚಾರ ಕ್ಲಿಯರ್ ಆಗುತ್ತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿಯ ಜನಸೇವಕ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಅಂಗಾರ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಲಿದೆಯಾ ಎನ್ನುವ ಪ್ರಶ್ನೆಗೆ ಎಲ್ಲವನ್ನೂ ಮೇಲಿನ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಸಹಕಾರದಿಂದ ಈ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ತಮ್ಮ ಪಕ್ಷ ಬಿಟ್ಟು ಬಂದಾಗ, ಅವರಿಗೆ ಪ್ರಾಮಿಸ್ ಮಾಡಿದಂತೆ ಸಚಿವ ಸ್ಥಾನ ನೀಡಿ ಋಣ ತೀರಿಸಿದ್ದೇವೆ. ಮೊದಲು ಅಲ್ಲಿಂದ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ಮಾಡಿ ವರಿಷ್ಠರು ನಿರ್ಧರಿಸುತ್ತಾರೆ. ನಮಗೆ ಪೂರ್ಣ ಬಹುಮತ ಬಂದಿದ್ರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದರು.
ಇನ್ನು ಸಿದ್ದರಾಮಯ್ಯ ಗೋಮಂಸ ಭಕ್ಷಣೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ, ಸಿದ್ದರಾಮಯ್ಯ ಅವರ ಎರಡು ಹೇಳಿಕೆ ನೋಡಿದ್ದೇನೆ. ಸುಳ್ಳು ಹೇಳುವವರಿಗೆ ನೀಡಬಹುದಾದ ನೋಬೆಲ್ ಪ್ರಶಸ್ತಿ ಸಿದ್ದರಾಮಯ್ಯ ಅವರಿಗೇ ನೀಡಬೇಕು. ಸಿದ್ದರಾಮಯ್ಯ ಹೇಳೊದು ಬರೀ ಸುಳ್ಳು ಸುಳ್ಳು.. ಮುಖ್ಯಮಂತ್ರಿ ಆಗಿದ್ದವರ ನಡವಳಿಕೆ, ಆಚಾರ ವಿಚಾರವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಬೇಕಿದ್ದರೆ ಮುಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಲಿ. ಪ್ರತಿ ಮನೆಗೆ ಉಚಿತ ಗೋಮಂಸ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಹೇಳಲಿ. ಗೋರಕ್ಷರಿಗೆ ರಕ್ಷಣೆ ನೀಡದೇ ಕಾಂಗ್ರೆಸ್ ಗೋಕಳ್ಳರಿಗೆ ರಕ್ಷಣೆ ನೀಡಿತ್ತು. ಇವತ್ತು ಅದರ ಪರಿಣಾಮವನ್ನು ಆನುಭವಿಸುತ್ತಿದ್ದಾರೆ ಎಂದು ಹೇಳಿದರು.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am