ಬ್ರೇಕಿಂಗ್ ನ್ಯೂಸ್
11-01-21 11:00 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಎಷ್ಟು ಸ್ಥಾನಕ್ಕೆ ಬದಲಾವಣೆ ಆಗಲಿದೆ, ಇವೆಲ್ಲವನ್ನು ರಾಜ್ಯ ಹಾಗು ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ಜನವರಿ 13 ರಂದು ಇವೆಲ್ಲ ವಿಚಾರ ಕ್ಲಿಯರ್ ಆಗುತ್ತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿಯ ಜನಸೇವಕ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಅಂಗಾರ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಲಿದೆಯಾ ಎನ್ನುವ ಪ್ರಶ್ನೆಗೆ ಎಲ್ಲವನ್ನೂ ಮೇಲಿನ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಸಹಕಾರದಿಂದ ಈ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ತಮ್ಮ ಪಕ್ಷ ಬಿಟ್ಟು ಬಂದಾಗ, ಅವರಿಗೆ ಪ್ರಾಮಿಸ್ ಮಾಡಿದಂತೆ ಸಚಿವ ಸ್ಥಾನ ನೀಡಿ ಋಣ ತೀರಿಸಿದ್ದೇವೆ. ಮೊದಲು ಅಲ್ಲಿಂದ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ಮಾಡಿ ವರಿಷ್ಠರು ನಿರ್ಧರಿಸುತ್ತಾರೆ. ನಮಗೆ ಪೂರ್ಣ ಬಹುಮತ ಬಂದಿದ್ರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದರು.
ಇನ್ನು ಸಿದ್ದರಾಮಯ್ಯ ಗೋಮಂಸ ಭಕ್ಷಣೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ, ಸಿದ್ದರಾಮಯ್ಯ ಅವರ ಎರಡು ಹೇಳಿಕೆ ನೋಡಿದ್ದೇನೆ. ಸುಳ್ಳು ಹೇಳುವವರಿಗೆ ನೀಡಬಹುದಾದ ನೋಬೆಲ್ ಪ್ರಶಸ್ತಿ ಸಿದ್ದರಾಮಯ್ಯ ಅವರಿಗೇ ನೀಡಬೇಕು. ಸಿದ್ದರಾಮಯ್ಯ ಹೇಳೊದು ಬರೀ ಸುಳ್ಳು ಸುಳ್ಳು.. ಮುಖ್ಯಮಂತ್ರಿ ಆಗಿದ್ದವರ ನಡವಳಿಕೆ, ಆಚಾರ ವಿಚಾರವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಬೇಕಿದ್ದರೆ ಮುಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಲಿ. ಪ್ರತಿ ಮನೆಗೆ ಉಚಿತ ಗೋಮಂಸ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಹೇಳಲಿ. ಗೋರಕ್ಷರಿಗೆ ರಕ್ಷಣೆ ನೀಡದೇ ಕಾಂಗ್ರೆಸ್ ಗೋಕಳ್ಳರಿಗೆ ರಕ್ಷಣೆ ನೀಡಿತ್ತು. ಇವತ್ತು ಅದರ ಪರಿಣಾಮವನ್ನು ಆನುಭವಿಸುತ್ತಿದ್ದಾರೆ ಎಂದು ಹೇಳಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:23 am
HK News Staffer
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm