ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm