ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm