ಬ್ರೇಕಿಂಗ್ ನ್ಯೂಸ್
13-01-21 01:16 pm Mangaluru Correspondant ಕರಾವಳಿ
ಮಂಗಳೂರು, ಜ.12: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರುವ ಯಾದಿಯಲ್ಲಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ನಿರಾಸೆಗೊಂಡಿದ್ದಾರೆ. ಸಂಪುಟ ಸೇರುವ ಏಳು ಮಂದಿಯ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ , ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯಮಾರ್ಗ ತಿಳಿದಿಲ್ಲ. ಜಾತಿ ರಾಜಾಕರಣದ ವೈಭವೀಕರಣ ತಿಳಿದಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯೂ ಈ ಮಾರ್ಗ ಹಿಡಿಯುವುದಿಲ್ಲ ಎಂಬುದಾಗಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವರಿಗೆ ಸ್ಥಾನ ಸಿಕ್ಕಿದೆ. ಜಾತಿಯ ಕೋಟಾದಡಿ ಲಾಬಿ ಮಾಡಿದವರಿಗೂ ಸ್ಥಾನ ಲಭಿಸಿದೆ. ಹೀಗಾಗಿ ಆ ರೀತಿಯ ಲಾಬಿ ನಡೆಸಲು ಹೋಗಿಲ್ಲ ಎನ್ನುವ ರೀತಿ ಟ್ವೀಟ್ ಮಾಡಿದ್ದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ.
— Sunil Kumar Karkala (@karkalasunil) January 13, 2021
ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ.
ಕಾರ್ಕಳದಲ್ಲಿ ಮೂರು ಬಾರಿ ಶಾಸಕರಾಗಿರುವ ಸುನಿಲ್ ಕುಮಾರ್, ಸುಳ್ಯದ ಅಂಗಾರ ಬಿಟ್ಟರೆ ಅತಿ ಹೆಚ್ಚು ಅನುಭವ ಇರುವ ಹಿರಿಯ ಶಾಸಕರಲ್ಲಿ ಒಬ್ಬರು. ಹೀಗಾಗಿ ಅಂಗಾರ ಅಥವಾ ಸುನಿಲ್ ಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿತ್ತು. ಅಲ್ಲದೆ, ವಿಧಾನ ಪರಿಷತ್ ಸದಸ್ಯ, ಹಾಲಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈಬಿಟ್ಟು ಬಿಲ್ಲವ ಸಮುದಾಯದವರೇ ಆಗಿರುವ ಸುನಿಲ್ ಕುಮಾರ್ ಗೆ ಸ್ಥಾನ ಸಿಗಲಿದೆ ಎನ್ನುವ ಮಾಹಿತಿಗಳಿದ್ದವು. ಆದರೆ, ಕೊನೆಗಳಿಗೆಯಲ್ಲಿ ಕೋಟ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಪ್ರಸ್ತಾಪ ಆಗಿಲ್ಲ. ಹೀಗಾಗಿ ಸುನಿಲ್ ಕುಮಾರ್ ಆಸೆಯೂ ಕೈಗೂಡಲಿಲ್ಲ.
ಸುನಿಲ್ ಕುಮಾರ್ ಸೇರಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಯ ಹಲವರಿಗೆ ನಿರಾಸೆಯಾಗಿದ್ದು, ಮುಂದಿನ ವಾರ ಸಭೆ ಸೇರಿ ಪಕ್ಷದ ಹಿರಿಯರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿಗಳಿವೆ.
Karnataka cabinet expansion Karkala MLA Sunil Kumar makes a disappointed tweet for not considering him.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 06:04 pm
Mangalore Correspondent
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
23-05-25 01:25 pm
HK News Desk
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm