ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am