ಬ್ರೇಕಿಂಗ್ ನ್ಯೂಸ್
14-01-21 07:43 pm Mangaluru Correspondant ಕರಾವಳಿ
ಮಂಗಳೂರು, ಜ.14: ಆಡಳಿತದಲ್ಲಿರುವ ಸರ್ಕಾರದ ಸದಸ್ಯರೇ ಸಿಎಂ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದಾರೆ. ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ನೀಡಲಾಗಿದೆಯಾ..? ಕಾರ್ಕಳ ಶಾಸಕರು ಕೂಡ ನನಗೆ ಪಕ್ಷ ನಿಷ್ಠೆ ಗೊತ್ತು , ಬ್ಲಾಕ್ ಮೇಲ್ ಗೊತ್ತಿಲ್ಲ ಎನ್ನುತ್ತಾರೆ. ಇದರ ಅರ್ಥ ಏನು ? ಬ್ಲಾಕ್ ಮೇಲ್ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟನೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಸಿಡಿ ಹೇಳಿಕೆಯ ಬಗ್ಗೆ ಜನರು ಗಮನಿಸುತ್ತಾರೆ. ಎಲ್ಲ ವಿಚಾರವನ್ನು ಅರ್ಥ ಮಾಡಿಕೊಳ್ಳುತ್ತಾರೆ. ಪ್ರಧಾನಮಂತ್ರಿಯನ್ನು ದೂಷಿಸಿದರೆ ದೇಶದ್ರೋಹಿ ಎನ್ನಲಾಗುತ್ತದೆ. ರಾಜ್ಯದ ಸಿಎಂ ಅವರನ್ನು ದೂಷಿಸಿದರೆ ದೇಶದ್ರೋಹಿ ಆಗಲ್ವಾ..? ಈಗ ಕರ್ನಾಟಕದ ಸಿಎಂಗೆ ಅಪಮಾನ ಮಾಡಲಾಗುತ್ತಿದೆ. ಆಡಳಿತದಲ್ಲಿರುವ ಸರ್ಕಾರದ ಶಾಸಕರೇ ಸಿಎಂರನ್ನು ದೂಷಿಸುತ್ತಿದ್ದಾರೆ ಎಂದು ಹೇಳಿದರು.
ಸಚಿವ ಸ್ಥಾನ ಕೊಡದ್ದಕ್ಕೆ ಬಿಜೆಪಿ ಶಾಸಕರೇ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುನಿರತ್ನಗೆ ಸಚಿವ ಸ್ಥಾನ ಯಾಕೆ ಕೊಟ್ಟಿಲ್ಲವೆಂದು ಮುಖ್ಯಮಂತ್ರಿಯವರೇ ಮುನಿರತ್ನಗೆ ಸ್ಪಷ್ಟನೆ ನೀಡಬೇಕು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಸುಳ್ಯದ ಶಾಸಕ ಎಸ್.ಅಂಗಾರ ಸಚಿವರಾದ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಕೊನೆಗೂ ಸುಳ್ಯ ಜನತೆಯ ಬೇಡಿಕೆ ಈಡೇರಿದೆ. ಎಸ್.ಅಂಗಾರ ಸಚಿವರಾಗಿರುವುದು ನಮಗೆ ಖುಷಿಯ ವಿಚಾರ. ಮಂಗಳೂರಿನ ಹೊಸ ಸಚಿವರಿಗೆ ನಾವು ಸದಾ ಬೆಂಬಲ ಕೊಡುತ್ತೇವೆ. ಕರಾವಳಿಯ ಇಬ್ಬರು ಸಚಿವರು ಕೂಡ ಹಿರಿಯರು. ದ.ಕ. ಜಿಲ್ಲೆಗೆ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಬೇಕು ಎಂದು ಹೇಳಿದರು.
ತಾಲೂಕು ಪಂಚಾಯತ್ ವ್ಯವಸ್ಥೆ ರದ್ದು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ತಾಲೂಕು ಮಟ್ಟದ ಅಭಿವೃದ್ಧಿಯನ್ನು ಜಿಲ್ಲಾಡಳಿತ ನೇರವಾಗಿ ನೋಡಲು ಆಗುತ್ತಾ..? ಆಡಳಿತ ವಿಕೇಂದ್ರೀಕರಣ ಇದರಿಂದ ಸಾಧ್ಯವಾಗುತ್ತಾ...? ತಾಪಂ ರದ್ದು, ಬಂದ್ ಮಾಡುವುದು ಸರ್ಕಾರದ ಕೆಲಸವಲ್ಲ. ಸ್ಥಳೀಯ ಪ್ರತಿನಿಧಿಗಳಿಗೆ ಅಧಿಕಾರ ಕೊಡುವುದು ಸರ್ಕಾರದ ಕೆಲಸ. ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ನಿಭಾಯಿಸಲು ತಂಡದ ಅಗತ್ಯವಿದೆ ಎಂದು ಹೇಳಿದರು.
MLA U T Khader said that the chief minister (CM) deserves the same respect as the prime minister of the country.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am