ಬ್ರೇಕಿಂಗ್ ನ್ಯೂಸ್
15-01-21 10:55 am Mangalore Correspondent ಕರಾವಳಿ
ಮಂಗಳೂರು, ಜ.15: ಶಾರ್ಜಾದಿಂದ ಭಾರತಕ್ಕೆ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ಚಿನ್ನ ತರುತ್ತಿದ್ದ ಮತ್ತಿಬ್ಬರು ಖದೀಮರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ನಿವಾಸಿ ಫೈಸಲ್ ತೊಟ್ಟಿ(37), ಮೊಹಮ್ಮದ್ ಸುಹೈಬ್ (31) ಬಂಧಿತರು. ಇವರು ತಮ್ಮ ಒಳ ಉಡುಪಿನ ಒಳಗೆ ರಹಸ್ಯವಾಗಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ತರುತ್ತಿದ್ದರು. ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯ ಕಂಡುಬಂದು ಆರೋಪಿಗಳನ್ನು ಪ್ಯಾಂಟ್, ಶರ್ಟ್ ಬಿಚ್ಚಿಸಿ ತನಿಖೆಗೆ ಒಳಪಡಿಸಿದಾಗ, ಚಿನ್ನದ ಅಂಶ ಪತ್ತೆಯಾಗಿದೆ. ಇಬ್ಬರ ಬಳಿ 24 ಕ್ಯಾರೆಟ್ ಮೌಲ್ಯದ 2 ಕೇಜಿ 154 ಗ್ರಾಮ್ ಚಿನ್ನ ಸಿಕ್ಕಿದ್ದು , ಇದರ ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ ಒಂದು ಕೋಟಿ 9 ಲಕ್ಷ ಆಗುತ್ತದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿಗಳು ಜ.14ರಂದು ಸಂಜೆ ಶಾರ್ಜಾದಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಮಂಗಳೂರು ಕಸ್ಟಮ್ಸ್ ವಿಭಾಗದ ಉಪಾಯುಕ್ತ ಪ್ರವೀಣ್ ಖಂಡಿ, ಎಸ್ಪಿಗಳಾದ ಶ್ರೀಕಾಂತ್, ರಂಜನ್ ಬೆಹ್ರಾ, ನವೀನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಸ್ಟಮ್ಸ್ ಆಯುಕ್ತರಾದ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನ್ಸ್ ಜಾರ್ಜ್, ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Gold worth Rs 1.9 Crore seized at Mangalore International Airport by a passenger who arrived from Dubai. He was smuggling the gold by hiding it inside his innewear.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm