ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.
ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm