ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.


ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm