ಬ್ರೇಕಿಂಗ್ ನ್ಯೂಸ್
15-01-21 11:18 pm Mangaluru Correspondent ಕರಾವಳಿ
ಮಂಗಳೂರು, ಜ.15: ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಬಂಧಿಸಿರುವ ಎಸ್ಡಿಪಿಐ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಎಸ್ ಡಿಪಿಐ ಪಕ್ಷದ ವತಿಯಿಂದ ಮಂಗಳೂರಿನಲ್ಲಿ ಎಸ್ಪಿ ಕಚೇರಿ ಚಲೋ ಮಾಡುವ ಯತ್ನ ನಡೆಯಿತು. ಆದರೆ, ಪೊಲೀಸರು ಕಾರ್ಯಕರ್ತರ ಪ್ರಯತ್ನವನ್ನು ವಿಫಲಗೊಳಿಸಿದರು.

ಕಾರ್ಯಕ್ರಮದ ಹಿನ್ನೆಲೆ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ನಡೆಸಲಾಗಿತ್ತು. ಗ್ರಾಮ ಪಂಚಾಯತ್ ಚುನಾವಣೆ ವಿಜಯೋತ್ಸವ ಸಂದರ್ಭ ಪಾಕ್ ಪರ ಘೋಷಣೆ ಕೂಗಿದ ಆರೋಪದಡಿ ಮೂವರು ಎಸ್ ಡಿ ಪಿ ಐ ಕಾರ್ಯಕರ್ತರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಆ ದಿನದಿಂದ ಬಂಧಿತ ಮೂವರು ಅಮಾಯಕರು ಅಂತಲೇ ಎಸ್ ಡಿ ಪಿ ಐ ವಾದಿಸುತ್ತಾ ಬಂದಿದ್ದು ಅವರನ್ನು ಬಂಧಮುಕ್ತ ಗೊಳಿಸಬೇಕೆಂದು ಒತ್ತಾಯಿಸುತ್ತಾ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ಮುತ್ತಿಗೆ ಹಾಕಿದ ಎಸ್ ಡಿ ಪಿ ಐ ಕಾರ್ಯಕರ್ತರು ಮಂಗಳೂರು ನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ಲಾನ್ ಹಾಕಿದ್ದರು. ಆದರೆ ನಗರದ ಕ್ಲಾಕ್ ಟವರ್ ನಿಂದ ಹೊರಟ ಮೆರವಣಿಗೆಯನ್ನು ಪೊಲೀಸರು ಪುರಭವನ ಸಮೀಪಿಸುತ್ತಲೇ ಬ್ಯಾರಿಕೇಡ್ ತಡೆಬೇಲಿಯಿಂದ ತಡೆದು ನಿಲ್ಲಿಸಿದರು. ಈ ಸಂದರ್ಭ ಅಲ್ಲಿಯೇ ಸುಮಾರು ಎರಡೂವರೆ ಗಂಟೆ ಧರಣಿ ಕೂತ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರಮುಖವಾಗಿ ಮೂರು ಬೇಡಿಕೆಗಳೊಂದಿಗೆ ಎಸ್ಪಿ ಕಚೇರಿ ಚಲೋ ನಡೆಸಲಾಗಿತ್ತು. ಪಾಕ್ ಪರ ಘೋಷಣೆ ಆರೋಪದ ಮೇರೆಗೆ ಬಂಧಿತ ಆರೋಪಿಗಳ ಬಿಡುಗಡೆ, ಬೆಳ್ತಂಗಡಿ ಎಸ್ಐ ಅಮಾನತು ಹಾಗೂ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ಬಿಜೆಪಿ ಕಾರ್ಯಕರ್ತನನ್ನ ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆ ಅರ್ಧದಲ್ಲೇ ತಡೆದ ಹಿನ್ನೆಲೆ ಪಶ್ಚಿಮ ವಲಯ ಐಜಿಪಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಬಳಿಕ ಐಜಿಪಿ ಪರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಥಳಕ್ಕೆ ತೆರಳಿ ಮನವಿ ಸ್ವೀಕರಿಸಿದರು.
SDPI on Friday January 15, organized a massive protest rally, 'SP Office Chalo', a foot march against arresting of its three workers by Beltangady police. The three are slapped with the accusation of raising pro-Pakistani slogans.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm