ಬ್ರೇಕಿಂಗ್ ನ್ಯೂಸ್
16-01-21 01:05 pm Udupi Correspondent ಕರಾವಳಿ
ಉಡುಪಿ, ಜ.16: ದೈತ್ಯ ವೇಷಗಳನ್ನು ಧರಿಸಿ, ಅಸಹಾಯಕ ಮಕ್ಕಳಿಗಾಗಿ ನಿಧಿ ಸಂಗ್ರಹಿಸಿ ಹೆಸರಾಗಿದ್ದ ಸಮಾಜ ಸೇವಕ ರವಿ ಕಡಪಾಡಿಯವರು ಇದೀಗ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 25 ಲಕ್ಷ ರೂ. ಗೆದ್ದುಕೊಂಡಿದ್ದಾರೆ. ಅಲ್ಲದೆ ಆ ಮೊತ್ತವನ್ನೂ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಕರ್ಮವೀರ್ ಸ್ಪೆಷಲ್ ಎಪಿಸೋಡ್ ವಿಭಾಗದಲ್ಲಿ ರವಿ ಕಟಪಾಡಿ ಭಾಗವಹಿಸಿದ್ದರು. ಅವರ ಜೊತೆ ಇನ್ನೊಬ್ಬ ಸಮಾಜಸೇವಕ ಅಂಬಾ ಬೆಹಾನ್ ಕೂಡ ಭಾಗವಹಿಸಿದ್ದು, ಜಂಟಿಯಾಗಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರಂಭಿಕ ಏಳು ಪ್ರಶ್ನೆಗಳಿಗೆ ರವಿಯವರು ಉತ್ತರಿಸಿದರೆ, ನಂತರದ ಪ್ರಶ್ನೆಗಳಿಗೆ ಅಂಬಾ ಉತ್ತರ ನೀಡಿದರು. ಹಿರಿಯ ನಟ ಅನುಪಮ್ ಖೇರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.


ರವಿ ಕಡಪಾಡಿಯವರು ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೈತ್ಯ ವೇಷಗಳನ್ನು ಹಾಕಿ, ಜನರನ್ನು ರಂಜಿಸುವುದಲ್ಲದೆ ಅದರಿಂದ ಬಂದ ನಿಧಿಯನ್ನು ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವೆಯನ್ನು ಗುರುತಿಸಿ, ಹಿಂದಿ ವಾಹಿನಿ ಜನಪ್ರಿಯ ಕಾರ್ಯಕ್ರಮದಲ್ಲಿ ಅವಕಾಶ ನೀಡಿತ್ತು.
ದೈತ್ಯ ವೇಷಗಳನ್ನು ಹಾಕಿ, ಮಕ್ಕಳ ಕಲ್ಯಾಣಕ್ಕಾಗಿ ಸಮಾಜ ಸೇವೆ ಮಾಡುವ ರವಿ ಕಟಪಾಡಿಯವರನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಿದ ಅಮಿತಾಬ್ ಬಚ್ಚನ್, ದರಿಯಾ ದಿಲ್ ದಾನವ್ ಬಿರುದು ನೀಡುವುದಾಗಿ ಘೋಷಿಸಿದ್ದು ವಿಶೇಷವಾಗಿತ್ತು.
Social worker Ravi Katapadi from Udupi wins 25 Lakhs on ‘Karamveer Special’ episode of popular Hindi game show ‘Kaun Banega Crorepati’ (KBC).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am