ಬ್ರೇಕಿಂಗ್ ನ್ಯೂಸ್
16-01-21 01:05 pm Udupi Correspondent ಕರಾವಳಿ
ಉಡುಪಿ, ಜ.16: ದೈತ್ಯ ವೇಷಗಳನ್ನು ಧರಿಸಿ, ಅಸಹಾಯಕ ಮಕ್ಕಳಿಗಾಗಿ ನಿಧಿ ಸಂಗ್ರಹಿಸಿ ಹೆಸರಾಗಿದ್ದ ಸಮಾಜ ಸೇವಕ ರವಿ ಕಡಪಾಡಿಯವರು ಇದೀಗ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 25 ಲಕ್ಷ ರೂ. ಗೆದ್ದುಕೊಂಡಿದ್ದಾರೆ. ಅಲ್ಲದೆ ಆ ಮೊತ್ತವನ್ನೂ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಕರ್ಮವೀರ್ ಸ್ಪೆಷಲ್ ಎಪಿಸೋಡ್ ವಿಭಾಗದಲ್ಲಿ ರವಿ ಕಟಪಾಡಿ ಭಾಗವಹಿಸಿದ್ದರು. ಅವರ ಜೊತೆ ಇನ್ನೊಬ್ಬ ಸಮಾಜಸೇವಕ ಅಂಬಾ ಬೆಹಾನ್ ಕೂಡ ಭಾಗವಹಿಸಿದ್ದು, ಜಂಟಿಯಾಗಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರಂಭಿಕ ಏಳು ಪ್ರಶ್ನೆಗಳಿಗೆ ರವಿಯವರು ಉತ್ತರಿಸಿದರೆ, ನಂತರದ ಪ್ರಶ್ನೆಗಳಿಗೆ ಅಂಬಾ ಉತ್ತರ ನೀಡಿದರು. ಹಿರಿಯ ನಟ ಅನುಪಮ್ ಖೇರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.


ರವಿ ಕಡಪಾಡಿಯವರು ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೈತ್ಯ ವೇಷಗಳನ್ನು ಹಾಕಿ, ಜನರನ್ನು ರಂಜಿಸುವುದಲ್ಲದೆ ಅದರಿಂದ ಬಂದ ನಿಧಿಯನ್ನು ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವೆಯನ್ನು ಗುರುತಿಸಿ, ಹಿಂದಿ ವಾಹಿನಿ ಜನಪ್ರಿಯ ಕಾರ್ಯಕ್ರಮದಲ್ಲಿ ಅವಕಾಶ ನೀಡಿತ್ತು.
ದೈತ್ಯ ವೇಷಗಳನ್ನು ಹಾಕಿ, ಮಕ್ಕಳ ಕಲ್ಯಾಣಕ್ಕಾಗಿ ಸಮಾಜ ಸೇವೆ ಮಾಡುವ ರವಿ ಕಟಪಾಡಿಯವರನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಿದ ಅಮಿತಾಬ್ ಬಚ್ಚನ್, ದರಿಯಾ ದಿಲ್ ದಾನವ್ ಬಿರುದು ನೀಡುವುದಾಗಿ ಘೋಷಿಸಿದ್ದು ವಿಶೇಷವಾಗಿತ್ತು.
Social worker Ravi Katapadi from Udupi wins 25 Lakhs on ‘Karamveer Special’ episode of popular Hindi game show ‘Kaun Banega Crorepati’ (KBC).
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm