ಬ್ರೇಕಿಂಗ್ ನ್ಯೂಸ್
13-08-20 11:07 am Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 13: ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿತರು ಗುಣಮುಖರಾದ ಮೇಲೆ ಅವರ ರಕ್ತದ ದ್ರವ ಭಾಗವನ್ನು ಶೇಖರಿಸಿ ಚಿಕಿತ್ಸೆ ನೀಡುವ ವಿಧಾನವನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಸೋಂಕಿತ ವ್ಯಕ್ತಿಯು ಚೇತರಿಸಿಕೊಳ್ಳುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ದೇಹದಿಂದ ಪ್ಲಾಸ್ಮಾ ಸಂಗ್ರಹಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯನ್ನು ಮಂಗಳೂರಿನಲ್ಲಿ ಅಳವಡಿಸಬೇಕು.
ಒಬ್ಬ ವ್ಯಕ್ತಿಯಿಂದ ಸಂಗ್ರಹಿಸುವ ಪ್ಲಾಸ್ಮಾದಿಂದ ಗರಿಷ್ಠ 5 ಜನರಿಗೆ ಚಿಕಿತ್ಸೆ ನೀಡಬಹುದು ಎನ್ನುವುದನ್ನು ಈಗಾಗಲೇ ಅದ್ಯಯನದ ಮೂಲಕ ಕಂಡು ಹಿಡಿಯಲಾಗಿದೆ. ಹಾಗಾಗಿ ಸೋಂಕಿತರನ್ನು ಗುಣಪಡಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವಿಚಾರವಾಗಿ ಜಿಲ್ಲಾಧಿಕಾರಿ ಹಾಗೂ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm