ಬ್ರೇಕಿಂಗ್ ನ್ಯೂಸ್
17-01-21 06:08 pm Mangalore Correspondent ಕರಾವಳಿ
ಪುತ್ತೂರು, ಜ.17: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ವಿದ್ಯುತ್ ತಂತಿ ಸ್ಪರ್ಷಗೊಂಡು ಕೂಲಿಕಾರ್ಮಿಕರೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ನಡೆದಿದೆ.
ಪೆರ್ಲಂಪಾಡಿ ಗ್ರಾಮದ ಏಣಿತಡ್ಕ ನಿವಾಸಿ ಕೃಷಿ ಕೂಲಿ ಕಾರ್ಮಿಕ ಅಶ್ರಫ್ ಅಲಿ (51) ಮೃತಪಟ್ಟ ವ್ಯಕ್ತಿ. ಅಶ್ರಫ್ ಅವರು ಉಜ್ರುಪಾದೆ ನಿವಾಸಿ ಗಣೇಶ್ ಎಂಬವರ ತೋಟದಲ್ಲಿ ಕರಿಮೆಣಸು ಕೊಯ್ಯಲೆಂದು ಅಲ್ಯುಮೀನಿಯಂ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ತೋಟದ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಷಗೊಂಡು ವಿದ್ಯುತ್ ಪ್ರವಹಿಸಿ ಅಶ್ರಫ್ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೂಲತ: ಕೇರಳ ನಿವಾಸಿಯಾಗಿರುವ ಅಶ್ರಫ್ ಅವರು ಪೆರ್ಲಂಪಾಡಿಯಿಂದ ವಿವಾಹವಾಗಿ ಮಾವನ ಮನೆಯಲ್ಲಿಯೇ ವಾಸವಾಗಿದ್ದರು. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A farmer died after he was electrocuted in his land at Puttur. The sampya police have registered the case.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am