ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ನಾಯಿ ಮರಿಗೆ ಕೃಷ್ಣ ವೇಷ ; ಕೃಷ್ಣಾಷ್ಟಮಿಯಂದೇ ಅಣಕಿಸಿದ ಮಾಡೆಲ್ !

13-08-20 12:45 pm       Mangalore Reporter   ಕರಾವಳಿ

ಕೃಷ್ಣ ಜನ್ಮಾಷ್ಟಮಿಯ ಹಬ್ಬದಂದೇ ಕ್ರಿಸ್ತಿಯನ್ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ ಹಾಕಿ ಹಿಂದು ದೇವರನ್ನು ನಿಂದಿಸಿರುವ ಆರೋಪ ಕೇಳಿಬಂದಿದೆ.

ಮಂಗಳೂರು, ಆಗಸ್ಟ್ 13: ಪ್ರವಾದಿ ಪೈಗಂಬರ್ ಅವರನ್ನು ಅವಹೇಳನ ಮಾಡಿದ ವಿಚಾರ ಒಂದ್ಕಡೆ ಹಿಂಸೆಯ ಕಿಡಿ ಹಬ್ಬಿಸಿದ್ದರೆ, ಇದೇ ವೇಳೆ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ಫೋಟೊಗಳನ್ನು ಅಪ್ಲೋಡ್ ಮಾಡಿರುವ ವಿಚಾರ ಈಗ ಆಕ್ರೋಶದ ಅಲೆ ಎಬ್ಬಿಸಿದೆ‌.‌

ಕೃಷ್ಣ ಜನ್ಮಾಷ್ಟಮಿಯ ಹಬ್ಬದಂದೇ ಕ್ರಿಸ್ತಿಯನ್ ಯುವತಿಯೊಬ್ಬಳು ತನ್ನ ಮುದ್ದಿನ ನಾಯಿಗೆ ಕೃಷ್ಣ ವೇಷ ಹಾಕಿ ಹಿಂದು ದೇವರನ್ನು ನಿಂದಿಸಿರುವ ಆರೋಪ ಕೇಳಿಬಂದಿದೆ. ಮಂಗಳೂರು ಮೂಲದ ಜೋಶಿಯಲ್ ಲೋಬೊ ಎನ್ನುವ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾಳೆ. ಕೃಷ್ಣ ಜನ್ಮಾಷ್ಟಮಿಯಂದು ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣ ವೇಷ ಹಾಕಿ, ಫೋಟೋಗಳನ್ನು ಫೇಸ್ಬುಕ್ ನಲ್ಲಿ ಹಾಕ್ಕೊಂಡಿದ್ದರೆ ಈ ಕ್ರಿಸ್ತಿಯನ್ ಯುವತಿ ಉದ್ದೇಶಪೂರ್ವಕವಾಗೇ ತನ್ನ ನಾಯಿ ಮರಿಗೆ ಕೃಷ್ಣ ವೇಷ ಹಾಕಿ, ತಲೆಗೆ ನವಿಲಿನ ಗರಿ, ಸೊಂಟಕ್ಕೆ ಕೊಳಲನ್ನು ಸಿಕ್ಕಿಸಿಕೊಂಡಿರುವ ಫೋಟೊಗಳನ್ನು ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಪೋಸ್ಟ್ ಮಾಡಿದ್ದಾಳೆ. 

ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ಕೇಳಿಬಂದಿದೆ. ತನ್ನ ಪೋಸ್ಟ್ ವೈರಲ್ ಆಗಿ ವಿರೋಧ ಕೇಳಿಬರುತ್ತಿದ್ದಂತೆ ಜೋಶಿಲ್ ಲೋಬೊ ಪೋಸ್ಟನ್ನು ಡಿಲೀಟ್ ಮಾಡಿದ್ದಾಳೆ. ನಾಲ್ಕು ದಿನಗಳ ಹಿಂದೆ ಈಕೆ ಈ ಫೋಟೊಗಳನ್ನು ಪೋಸ್ಟ್ ಮಾಡಿದ್ದಾಳೆ ಎನ್ನಲಾಗ್ತಿದ್ದು ವಿರೋಧ ಬಂದ ಬಳಿಕ ಕ್ಷಮೆ ಯಾಚಿಸಿ ಹೇಳಿಕೆಯನ್ನೂ ಹಾಕಿದ್ದಳು. ಈಗ ಬೆಂಗಳೂರಿನಲ್ಲಿ ದೇವ ನಿಂದೆಯ ವಿಚಾರ ಹಿಂಸೆಯ ಕಿಡಿ ಎಬ್ಬಿಸುತ್ತಿದ್ದಂತೆ ಎಲ್ಲವನ್ನೂ ಡಿಲೀಟ್ ಮಾಡಿ ಕಣ್ಮರೆಯಾಗಿದ್ದಾಳೆ.