ಬ್ರೇಕಿಂಗ್ ನ್ಯೂಸ್
17-01-21 07:10 pm Mangaluru Correspondent ಕರಾವಳಿ
ಕಾಸರಗೋಡು, ಜ.17: ಮಂಗಳೂರು - ತಿರುವನಂತಪುರಂ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ ಕೈಗೊಳ್ಳಲಾಗಿದ್ದು ಗೂಡ್ಸ್ ಬೋಗಿಯಲ್ಲಿ ತುಂಬಿಸಿದ್ದ ಎರಡು ಬೈಕಿನಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ಸಂಬಂಧಿಸಿ ಕಾಸರಗೋಡು ರೈಲ್ವೇ ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಗೂಡ್ಸ್ ಬೋಗಿಗೆ ದ್ವಿಚಕ್ರ ವಾಹನಗಳನ್ನು ತುಂಬಿಸುವ ವೇಳೆ ತಪಾಸಣೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ತನಿಖೆಯಲ್ಲಿ ಪತ್ತೆ ಮಾಡಲಾಗಿದೆ.

ಕಾಸರಗೋಡು ರೈಲ್ವೇ ನಿಲ್ದಾಣದಿಂದ ಎರಡು ಬೈಕ್ ಗಳನ್ನು ಲೋಡ್ ಮಾಡಿದ್ದು ಅದನ್ನು ತಿರುವನಂತಪುರ ಸಮೀಪದ ಪಾರಶಾಲಾ ಎಂಬಲ್ಲಿಗೆ ಒಯ್ಯಲಾಗುತ್ತಿತ್ತು. ಆದರೆ, ಬೈಕನ್ನು ರೈಲಿಗೆ ಲೋಡ್ ಮಾಡುವ ಮೊದಲು ಅದರಲ್ಲಿ ಪೆಟ್ರೋಲ್ ಟ್ಯಾಂಕ್ ಪೂರ್ತಿ ಖಾಲಿ ಮಾಡಿರಬೇಕೆಂಬ ನಿಯಮ ಇದೆ. ಬೈಕಿನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಮೂಡಿರುವುದರಿಂದ ರೈಲ್ವೇ ಸಿಬಂದಿ ಲೋಡಿಂಗ್ ವೇಳೆ ಪರಿಶೀಲನೆ ನಡೆಸಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲೇ ರೈಲು ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ, ಪಾಲಕ್ಕಾಡ್ ರೈಲ್ವೇ ವಿಭಾಗ ಆದೇಶ ಮಾಡಿದೆ.
ಮಂಗಳೂರಿನಿಂದ ತಿರುವನಂತಪುರಕ್ಕೆ ಸಾಗುತ್ತಿದ್ದ ಮಲಬಾರ್ ಎಕ್ಸ್ಪ್ರೆಸ್ ರೈಲು ಕೊನೆ ನಿಲ್ದಾಣ ತಲುಪುವುದಕ್ಕೆ 40 ಕಿಮೀ ದೂರ ಇರುವಾಗ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ವರ್ಕಳ ಎಂಬಲ್ಲಿ ಗೂಡ್ಸ್ ಬೋಗಿಗೆ ಬೆಂಕಿ ಹತ್ತಿಕೊಂಡಿತ್ತು. ಗೂಡ್ಸ್ ಬೋಗಿಯಾಗಿದ್ದರಿಂದ ಸಾವು ನೋವು ಸಂಭವಿಸಿರಲಿಲ್ಲ. ಹಿಂಭಾಗದ ಬೋಗಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಿಳಿದ ಪ್ರಯಾಣಿಕರು ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಬಳಿಕ ಇತರೇ ಬೋಗಿಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಲಾಗಿತ್ತು.
Also Read: ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Bikes that were loaded in the goods bogie caused the major train mishap of a fire in a moving train from Mangaluru to Thiruvananthapuram on Sunday in Kasargod.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm