ಬ್ರೇಕಿಂಗ್ ನ್ಯೂಸ್
17-01-21 07:10 pm Mangaluru Correspondent ಕರಾವಳಿ
ಕಾಸರಗೋಡು, ಜ.17: ಮಂಗಳೂರು - ತಿರುವನಂತಪುರಂ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ ಕೈಗೊಳ್ಳಲಾಗಿದ್ದು ಗೂಡ್ಸ್ ಬೋಗಿಯಲ್ಲಿ ತುಂಬಿಸಿದ್ದ ಎರಡು ಬೈಕಿನಿಂದ ಬೆಂಕಿ ಹತ್ತಿಕೊಂಡಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ಸಂಬಂಧಿಸಿ ಕಾಸರಗೋಡು ರೈಲ್ವೇ ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಗೂಡ್ಸ್ ಬೋಗಿಗೆ ದ್ವಿಚಕ್ರ ವಾಹನಗಳನ್ನು ತುಂಬಿಸುವ ವೇಳೆ ತಪಾಸಣೆ ಮಾಡುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ತನಿಖೆಯಲ್ಲಿ ಪತ್ತೆ ಮಾಡಲಾಗಿದೆ.

ಕಾಸರಗೋಡು ರೈಲ್ವೇ ನಿಲ್ದಾಣದಿಂದ ಎರಡು ಬೈಕ್ ಗಳನ್ನು ಲೋಡ್ ಮಾಡಿದ್ದು ಅದನ್ನು ತಿರುವನಂತಪುರ ಸಮೀಪದ ಪಾರಶಾಲಾ ಎಂಬಲ್ಲಿಗೆ ಒಯ್ಯಲಾಗುತ್ತಿತ್ತು. ಆದರೆ, ಬೈಕನ್ನು ರೈಲಿಗೆ ಲೋಡ್ ಮಾಡುವ ಮೊದಲು ಅದರಲ್ಲಿ ಪೆಟ್ರೋಲ್ ಟ್ಯಾಂಕ್ ಪೂರ್ತಿ ಖಾಲಿ ಮಾಡಿರಬೇಕೆಂಬ ನಿಯಮ ಇದೆ. ಬೈಕಿನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಮೂಡಿರುವುದರಿಂದ ರೈಲ್ವೇ ಸಿಬಂದಿ ಲೋಡಿಂಗ್ ವೇಳೆ ಪರಿಶೀಲನೆ ನಡೆಸಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲೇ ರೈಲು ನಿಲ್ದಾಣದ ಗೂಡ್ಸ್ ಸುಪರಿಡೆಂಟ್ ಆಗಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ, ಪಾಲಕ್ಕಾಡ್ ರೈಲ್ವೇ ವಿಭಾಗ ಆದೇಶ ಮಾಡಿದೆ.
ಮಂಗಳೂರಿನಿಂದ ತಿರುವನಂತಪುರಕ್ಕೆ ಸಾಗುತ್ತಿದ್ದ ಮಲಬಾರ್ ಎಕ್ಸ್ಪ್ರೆಸ್ ರೈಲು ಕೊನೆ ನಿಲ್ದಾಣ ತಲುಪುವುದಕ್ಕೆ 40 ಕಿಮೀ ದೂರ ಇರುವಾಗ ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ವರ್ಕಳ ಎಂಬಲ್ಲಿ ಗೂಡ್ಸ್ ಬೋಗಿಗೆ ಬೆಂಕಿ ಹತ್ತಿಕೊಂಡಿತ್ತು. ಗೂಡ್ಸ್ ಬೋಗಿಯಾಗಿದ್ದರಿಂದ ಸಾವು ನೋವು ಸಂಭವಿಸಿರಲಿಲ್ಲ. ಹಿಂಭಾಗದ ಬೋಗಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಿಳಿದ ಪ್ರಯಾಣಿಕರು ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಬಳಿಕ ಇತರೇ ಬೋಗಿಗಳಿಗೆ ಬೆಂಕಿ ಹರಡದಂತೆ ಬೆಂಕಿ ನಂದಿಸಲಾಗಿತ್ತು.
Also Read: ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Bikes that were loaded in the goods bogie caused the major train mishap of a fire in a moving train from Mangaluru to Thiruvananthapuram on Sunday in Kasargod.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am