ಬ್ರೇಕಿಂಗ್ ನ್ಯೂಸ್
18-01-21 04:50 pm Mangalore Correspondent ಕರಾವಳಿ
ಉಳ್ಳಾಲ, ಜ. 18: ಸೋಮೇಶ್ವರ ಕಡಲ ತೀರದಲ್ಲಿ ಕಡಲು ಪಾಲಾಗುತ್ತಿದ್ದ ಅನೇಕ ಪ್ರವಾಸಿಗರನ್ನು ಜೀವದ ಹಂಗು ತೊರೆದು ರಕ್ಷಿಸುತ್ತಿರುವ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ಸರಕಾರವು ಗುರುತಿಸಿ, ಪ್ರಶಸ್ತಿ ನೀಡಬೇಕು. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು.
ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ತೊಕ್ಕೊಟ್ಟಿನ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಾಯಿ ಪರಿವಾರ್ ಟ್ರಸ್ಟ್ ಮಾರ್ಗದರ್ಶಕರಾದ ಚಂದ್ರಹಾಸ್ ಪಂಡಿತ್ ಹೌಸ್ ಮಾತನಾಡಿ ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಣದ ಹಂಗು ತೊರೆದು ಪ್ರವಾಸಿಗರ ಪ್ರಾಣ ರಕ್ಷಣೆ ಮಾಡುವ ಸೇವೆಯನ್ನು ಮಾಡುತ್ತಾ ಬಂದಿರುವ ಅಶೋಕ್ ಸೋಮೇಶ್ವರ ಅವರ ಕಾರ್ಯ ಶ್ಲಾಘನೀಯ. ಸರಕಾರಿ ಸಂಬಳವಿಲ್ಲದಿದ್ದರೂ ಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ಅಶೋಕ್ ಅವರನ್ನು ಸರಕಾರ ಗುರುತಿಸುವ ಅಗತ್ಯವಿದೆ. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಹೇಳಿದರು.

ಸನ್ಮಾನ ಸ್ವೀಕರಿಸಿದ ಅಶೋಕ್ ಸೋಮೇಶ್ವರ ಮಾತನಾಡಿ ಸೇವೆಯಲ್ಲಿ ಯಾವುದೇ ಫಲಾಪೇಕ್ಷೆ ಇರಬಾರದು. ಫಲಾಪೇಕ್ಷೆ ಬಯಸಿದವ ಸೇವಕನಾಗಲು ಸಾಧ್ಯವಿಲ್ಲ. ಅನೇಕ ವೇದಿಕೆಗಳಲ್ಲಿ ಸನ್ಮಾನ ಪಡೆದಿದ್ದರೂ ಕಡಲ ತೀರದಲ್ಲೇ ಪಡೆದ ಈ ಸನ್ಮಾನ ಎಂದಿಗೂ ಮರೆಯಲು ಸಾಧ್ಯವಿಲ್ಲವೆಂದರು.
ಅಡ್ಕ ಭಗವತಿ ಕ್ಷೇತ್ರದ ಅರ್ಚಕ ವಸಂತ್ ಉಚ್ಚಿಲ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್. ಕುಂಪಲ, ಪುರುಷೋತ್ತಮ್ ಕಲ್ಲಾಪು, ಶವಿತ್ ಉಚ್ಚಿಲ್, ಕಲಾವಿದ ಜೆ.ಪಿ ಆಚಾರ್ಯ, ಸತೀಶ್ ಭಟ್ನಗರ, ರವಿಶಂಕರ್ ಸೋಮೇಶ್ವರ, ರಮೇಶ್ ಕೊಂಡಾಣ, ಜಯಂತ್ ಕಾಪಿಕಾಡ್, ಕಿಶೋರ್ ಮಂಚಿ, ವಿಶ್ವನಾಥ್ ಮಂಚಿ, ಸೂರ್ಯ ಕುಂಪಲ, ಪ್ರವೀಣ್ ಮೆಸ್ಕಾಂ, ಸುಖೇಶ್ ಉಚ್ಚಿಲ್ ಮೊದಲಾದವರು ಇದ್ದರು.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm