ಬ್ರೇಕಿಂಗ್ ನ್ಯೂಸ್
18-01-21 04:50 pm Mangalore Correspondent ಕರಾವಳಿ
ಉಳ್ಳಾಲ, ಜ. 18: ಸೋಮೇಶ್ವರ ಕಡಲ ತೀರದಲ್ಲಿ ಕಡಲು ಪಾಲಾಗುತ್ತಿದ್ದ ಅನೇಕ ಪ್ರವಾಸಿಗರನ್ನು ಜೀವದ ಹಂಗು ತೊರೆದು ರಕ್ಷಿಸುತ್ತಿರುವ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ಸರಕಾರವು ಗುರುತಿಸಿ, ಪ್ರಶಸ್ತಿ ನೀಡಬೇಕು. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು.
ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿ ಅಶೋಕ್ ಸೋಮೇಶ್ವರ ಅವರನ್ನು ತೊಕ್ಕೊಟ್ಟಿನ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಾಯಿ ಪರಿವಾರ್ ಟ್ರಸ್ಟ್ ಮಾರ್ಗದರ್ಶಕರಾದ ಚಂದ್ರಹಾಸ್ ಪಂಡಿತ್ ಹೌಸ್ ಮಾತನಾಡಿ ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರಾಣದ ಹಂಗು ತೊರೆದು ಪ್ರವಾಸಿಗರ ಪ್ರಾಣ ರಕ್ಷಣೆ ಮಾಡುವ ಸೇವೆಯನ್ನು ಮಾಡುತ್ತಾ ಬಂದಿರುವ ಅಶೋಕ್ ಸೋಮೇಶ್ವರ ಅವರ ಕಾರ್ಯ ಶ್ಲಾಘನೀಯ. ಸರಕಾರಿ ಸಂಬಳವಿಲ್ಲದಿದ್ದರೂ ಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ಅಶೋಕ್ ಅವರನ್ನು ಸರಕಾರ ಗುರುತಿಸುವ ಅಗತ್ಯವಿದೆ. ಈ ಬಗ್ಗೆ ಸಚಿವರು, ಸಂಸದರಲ್ಲಿ ಮಾತುಕತೆ ನಡೆಸುವುದಾಗಿ ಹೇಳಿದರು.

ಸನ್ಮಾನ ಸ್ವೀಕರಿಸಿದ ಅಶೋಕ್ ಸೋಮೇಶ್ವರ ಮಾತನಾಡಿ ಸೇವೆಯಲ್ಲಿ ಯಾವುದೇ ಫಲಾಪೇಕ್ಷೆ ಇರಬಾರದು. ಫಲಾಪೇಕ್ಷೆ ಬಯಸಿದವ ಸೇವಕನಾಗಲು ಸಾಧ್ಯವಿಲ್ಲ. ಅನೇಕ ವೇದಿಕೆಗಳಲ್ಲಿ ಸನ್ಮಾನ ಪಡೆದಿದ್ದರೂ ಕಡಲ ತೀರದಲ್ಲೇ ಪಡೆದ ಈ ಸನ್ಮಾನ ಎಂದಿಗೂ ಮರೆಯಲು ಸಾಧ್ಯವಿಲ್ಲವೆಂದರು.
ಅಡ್ಕ ಭಗವತಿ ಕ್ಷೇತ್ರದ ಅರ್ಚಕ ವಸಂತ್ ಉಚ್ಚಿಲ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್. ಕುಂಪಲ, ಪುರುಷೋತ್ತಮ್ ಕಲ್ಲಾಪು, ಶವಿತ್ ಉಚ್ಚಿಲ್, ಕಲಾವಿದ ಜೆ.ಪಿ ಆಚಾರ್ಯ, ಸತೀಶ್ ಭಟ್ನಗರ, ರವಿಶಂಕರ್ ಸೋಮೇಶ್ವರ, ರಮೇಶ್ ಕೊಂಡಾಣ, ಜಯಂತ್ ಕಾಪಿಕಾಡ್, ಕಿಶೋರ್ ಮಂಚಿ, ವಿಶ್ವನಾಥ್ ಮಂಚಿ, ಸೂರ್ಯ ಕುಂಪಲ, ಪ್ರವೀಣ್ ಮೆಸ್ಕಾಂ, ಸುಖೇಶ್ ಉಚ್ಚಿಲ್ ಮೊದಲಾದವರು ಇದ್ದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm