ಬ್ರೇಕಿಂಗ್ ನ್ಯೂಸ್
18-01-21 06:39 pm Mangalore Correspondent ಕರಾವಳಿ
ಮಂಗಳೂರು, ಜ.18: ಆರು ತಿಂಗಳ ಹಿಂದೆ ಕೇಂದ್ರ ಗುಪ್ತಚರ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದ್ದ ಸ್ಯಾಟಲೈಟ್ ಫೋನ್ ಕರಾವಳಿಯಲ್ಲಿ ಮತ್ತೆ ಆಕ್ಟಿವ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ.
ಗುಪ್ತಚರ ಅಧಿಕಾರಿಗಳು, ಸ್ಥಳೀಯ ಪೊಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಬಳಿಕ ಕಳೆದ ಆರು ತಿಂಗಳಿಂದಲೂ ಸ್ಯಾಟಲೈಟ್ ಫೋನ್ ಗಳು ಸೈಲೆಂಟಾಗಿದ್ದವು. ಇದೀಗ ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಮತ್ತೆ ಸ್ಯಾಟ್ ಲೈಟ್ ಫೋನ್ ರಿಂಗಣಿಸಿದೆ. ಕಳೆದ 10 ದಿನಗಳಲ್ಲಿ ಮೂರು ಬಾರಿ ಆಕ್ಟಿವ್ ಆಗಿದ್ದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಫೋನ್ ಸಕ್ರಿಯವಾಗಿರುವ ಬಗ್ಗೆ ಲೊಕೇಷನ್ ಟ್ರೇಸ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನಕಮಜಲು ಎಂಬಲ್ಲಿ ಲೊಕೇಶನ್ ಕಂಡುಬಂದಿದ್ದು ಆ ಜಾಗದಲ್ಲಿ ಯಾರೋ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಗುಪ್ತಚರ ಏಜೆನ್ಸಿ 'ರಾ' ಸಂಸ್ಥೆಯ ಅಧಿಕಾರಿಗಳು ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆಗಿರುವುದನ್ನು ಪತ್ತೆ ಮಾಡಿ ರಾಜ್ಯ ಗುಪ್ತಚರ ಇಲಾಖೆಗೆ ಸಂದೇಶ ರವಾನಿಸಿದ್ದಾರೆ.

ಭಾರತದಲ್ಲಿ ನಿಷೇಧಿಸಲಾಗಿರುವ ತುರಾಯಾ ಸ್ಯಾಟಲೈಟ್ ಫೋನ್ ನಿಂದ ನಿಗೂಢ ವ್ಯಕ್ತಿಗಳ ಜೊತೆ ಸಂಪರ್ಕ ಸಾಧಿಸಿದ್ದನ್ನು ಪತ್ತೆ ಮಾಡಲಾಗಿದೆ. ಕೇಂದ್ರ ಇಂಟೆಲಿಜೆನ್ಸ್ ಅಧಿಕಾರಿಗಳ ಸೂಚನೆಯಂತೆ ರಾಜ್ಯ ಗುಪ್ತಚರ ಇಲಾಖೆಯಿಂದ ಈಗ ತನಿಖೆ ಆರಂಭಿಸಲಾಗಿದೆ. ಸ್ಯಾಟಲೈಟ್ ಫೋನ್ ಗಳನ್ನು ನಿಷೇಧಿಸಿರುವುದರಿಂದ ಉಗ್ರವಾದಿ ಚಟುವಟಿಕೆ ನಿರತರು ಈ ಫೋನ್ ಬಳಕೆ ಮಾಡಿರುವ ಸಾಧ್ಯತೆ ಕಂಡುಬಂದಿದೆ. ಹೀಗಾಗಿ ಸದ್ದಿಲ್ಲದ ರೀತಿ ಕರಾವಳಿಯ ಸ್ಲೀಪರ್ ಸೆಲ್ ಗಳು ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ಮೂಡುತ್ತಿದೆ.
ಒಂದು ವರ್ಷದ ಹಿಂದೆ ಧರ್ಮಸ್ಥಳ ಬಳಿ ಸ್ಯಾಟಲೈಟ್ ಫೋನ್ ಬಳಕೆ ಆಗಿದ್ದನ್ನು ಪತ್ತೆ ಮಾಡಲಾಗಿತ್ತು. ಗುಪ್ತಚರ ಅಧಿಕಾರಿಗಳು ಅಲ್ಲಿಗೆ ತೆರಳಿ, ತನಿಖೆ ಕೈಗೊಂಡಿದ್ದರು. ಆದರೆ, ಯಾವುದೇ ಮಾಹಿತಿ ಪೊಲೀಸರಿಗೆ ಲಭಿಸಿರಲಿಲ್ಲ. ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆದರೂ ಅದನ್ನು ಪತ್ತೆ ಮಾಡಲು ಸಾಧ್ಯವಾಗದಿರುವುದು ಪೊಲೀಸರ ತಲೆನೋವಿಗೆ ಕಾರಣವಾಗಿತ್ತು. ಇದೀಗ ಮತ್ತೆ ಅಂಥದ್ದೇ ಸನ್ನಿವೇಶ ಸೃಷ್ಟಿಯಾಗಿದ್ದು ಪೊಲೀಸರ ನಿದ್ದೆಗೆಡಿಸಿದೆ.
Satellite phones activate once again In Mangalore and coastal areas Inform I sources to inform high sources.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am