ಬ್ರೇಕಿಂಗ್ ನ್ಯೂಸ್
18-01-21 06:39 pm Mangalore Correspondent ಕರಾವಳಿ
ಮಂಗಳೂರು, ಜ.18: ಆರು ತಿಂಗಳ ಹಿಂದೆ ಕೇಂದ್ರ ಗುಪ್ತಚರ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದ್ದ ಸ್ಯಾಟಲೈಟ್ ಫೋನ್ ಕರಾವಳಿಯಲ್ಲಿ ಮತ್ತೆ ಆಕ್ಟಿವ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ.
ಗುಪ್ತಚರ ಅಧಿಕಾರಿಗಳು, ಸ್ಥಳೀಯ ಪೊಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಬಳಿಕ ಕಳೆದ ಆರು ತಿಂಗಳಿಂದಲೂ ಸ್ಯಾಟಲೈಟ್ ಫೋನ್ ಗಳು ಸೈಲೆಂಟಾಗಿದ್ದವು. ಇದೀಗ ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಮತ್ತೆ ಸ್ಯಾಟ್ ಲೈಟ್ ಫೋನ್ ರಿಂಗಣಿಸಿದೆ. ಕಳೆದ 10 ದಿನಗಳಲ್ಲಿ ಮೂರು ಬಾರಿ ಆಕ್ಟಿವ್ ಆಗಿದ್ದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಫೋನ್ ಸಕ್ರಿಯವಾಗಿರುವ ಬಗ್ಗೆ ಲೊಕೇಷನ್ ಟ್ರೇಸ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನಕಮಜಲು ಎಂಬಲ್ಲಿ ಲೊಕೇಶನ್ ಕಂಡುಬಂದಿದ್ದು ಆ ಜಾಗದಲ್ಲಿ ಯಾರೋ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಗುಪ್ತಚರ ಏಜೆನ್ಸಿ 'ರಾ' ಸಂಸ್ಥೆಯ ಅಧಿಕಾರಿಗಳು ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆಗಿರುವುದನ್ನು ಪತ್ತೆ ಮಾಡಿ ರಾಜ್ಯ ಗುಪ್ತಚರ ಇಲಾಖೆಗೆ ಸಂದೇಶ ರವಾನಿಸಿದ್ದಾರೆ.

ಭಾರತದಲ್ಲಿ ನಿಷೇಧಿಸಲಾಗಿರುವ ತುರಾಯಾ ಸ್ಯಾಟಲೈಟ್ ಫೋನ್ ನಿಂದ ನಿಗೂಢ ವ್ಯಕ್ತಿಗಳ ಜೊತೆ ಸಂಪರ್ಕ ಸಾಧಿಸಿದ್ದನ್ನು ಪತ್ತೆ ಮಾಡಲಾಗಿದೆ. ಕೇಂದ್ರ ಇಂಟೆಲಿಜೆನ್ಸ್ ಅಧಿಕಾರಿಗಳ ಸೂಚನೆಯಂತೆ ರಾಜ್ಯ ಗುಪ್ತಚರ ಇಲಾಖೆಯಿಂದ ಈಗ ತನಿಖೆ ಆರಂಭಿಸಲಾಗಿದೆ. ಸ್ಯಾಟಲೈಟ್ ಫೋನ್ ಗಳನ್ನು ನಿಷೇಧಿಸಿರುವುದರಿಂದ ಉಗ್ರವಾದಿ ಚಟುವಟಿಕೆ ನಿರತರು ಈ ಫೋನ್ ಬಳಕೆ ಮಾಡಿರುವ ಸಾಧ್ಯತೆ ಕಂಡುಬಂದಿದೆ. ಹೀಗಾಗಿ ಸದ್ದಿಲ್ಲದ ರೀತಿ ಕರಾವಳಿಯ ಸ್ಲೀಪರ್ ಸೆಲ್ ಗಳು ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ಮೂಡುತ್ತಿದೆ.
ಒಂದು ವರ್ಷದ ಹಿಂದೆ ಧರ್ಮಸ್ಥಳ ಬಳಿ ಸ್ಯಾಟಲೈಟ್ ಫೋನ್ ಬಳಕೆ ಆಗಿದ್ದನ್ನು ಪತ್ತೆ ಮಾಡಲಾಗಿತ್ತು. ಗುಪ್ತಚರ ಅಧಿಕಾರಿಗಳು ಅಲ್ಲಿಗೆ ತೆರಳಿ, ತನಿಖೆ ಕೈಗೊಂಡಿದ್ದರು. ಆದರೆ, ಯಾವುದೇ ಮಾಹಿತಿ ಪೊಲೀಸರಿಗೆ ಲಭಿಸಿರಲಿಲ್ಲ. ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆದರೂ ಅದನ್ನು ಪತ್ತೆ ಮಾಡಲು ಸಾಧ್ಯವಾಗದಿರುವುದು ಪೊಲೀಸರ ತಲೆನೋವಿಗೆ ಕಾರಣವಾಗಿತ್ತು. ಇದೀಗ ಮತ್ತೆ ಅಂಥದ್ದೇ ಸನ್ನಿವೇಶ ಸೃಷ್ಟಿಯಾಗಿದ್ದು ಪೊಲೀಸರ ನಿದ್ದೆಗೆಡಿಸಿದೆ.
Satellite phones activate once again In Mangalore and coastal areas Inform I sources to inform high sources.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm