ಬ್ರೇಕಿಂಗ್ ನ್ಯೂಸ್
19-01-21 03:22 pm Mangalore Correspondent ಕರಾವಳಿ
ಮಂಗಳೂರು, ಜ.19: ಉಳ್ಳಾಲದ ಎಸ್ ಡಿಪಿಐ ಮುಖಂಡ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಘಟನೆಯ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೋ ಮತ್ತು ಮಹಿಳೆಗೆ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಯ ಪತ್ತೆಗೆ ಎರಡು ತಂಡಗಳನ್ನು ರಚಿಸಿದ್ದೇವೆ. ಆರೋಪಿ ಕೇರಳಕ್ಕೆ ಪರಾರಿಯಾಗಿರುವ ಶಂಕೆಯಿದ್ದು, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ, ಮಹಿಳೆಯನ್ನು ದೂರು ನೀಡದಂತೆ ಕೆಲವು ಸಮುದಾಯದ ಮುಖಂಡರು ಒತ್ತಡ ಹೇರಿದ ಬಗ್ಗೆಯೂ ಮಹಿಳೆ ದೂರು ನೀಡಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಸತತವಾಗಿ ಪೀಡಿಸಿದ ಬಗ್ಗೆ ದೂರು ಲಭಿಸಿತ್ತು. ಕೊನೆಯ ಬಾರಿಗೆ ಕಳೆದ ಡಿ.25ರಂದು ಆತ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಆಕೆಯೇ ಸ್ವತಃ ಮುಂದೆ ಬಂದು ದೂರು ದಾಖಲಿಸಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಚೈಲ್ಡ್ ಕೇರ್ ಸಂಸ್ಥೆಯವರು ಪರಿಶೀಲನೆ ನಡೆಸಿದ್ದು, ಕಿರುಕುಳ ಆಗಿರುವ ಬಗ್ಗೆ ದೃಢಪಟ್ಟ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ನಮಗೆ ಅಪರಾಧ ಮತ್ತು ಅಪರಾಧಿಗಳನ್ನು ಪತ್ತೆ ಮಾಡುವುದಷ್ಟೇ ಮುಖ್ಯ. ಅವರು ಯಾವ ಸಂಘಟನೆಯವರು, ರಾಜಕೀಯ ಪಕ್ಷದಲ್ಲಿ ಇದ್ದಾರೆಯೇ ಎಂಬ ಬಗ್ಗೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದರ ಅಗತ್ಯವೂ ಇಲ್ಲ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.
ಎಸ್ ಡಿಪಿಎಐ ಉಳ್ಳಾಲ ಸಮಿತಿ ಅಧ್ಯಕ್ಷ ಸಿದ್ದೀಕ್ ಉಳ್ಳಾಲ್ ಎಂಬಾತ ಈ ದುಷ್ಕೃತ್ಯ ಎಸಗಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಸುದ್ದಿ ಪ್ರಕಟಿಸಿ ಪ್ರಕರಣ ಬಯಲಿಗೆ ತಂದಿತ್ತು ಎಂಬುದನ್ನು ಸ್ಮರಿಸಬಹುದು.
Video:
A special team has been formed to arrest SDPI leader Sadiq from Ullal who has been alleged of sexual harassment on women and her two children.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm